ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳ ಪ್ರಕಾರ, 23 ಡಿಸೆಂಬರ್ 2025ರಿಂದ ಹೊಸ ನಿಯಮ ಜಾರಿಯಲ್ಲಿದೆ.

ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಿನ ಜಮೀನುಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು 30 ದಿನಗಳೊಳಗೆ ತೀರ್ಮಾನ ಕೈಗೊಳ್ಳಬೇಕು. 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ, ಅರ್ಜಿದಾರರು ಶುಲ್ಕ ಪಾವತಿಸಿದ್ದಲ್ಲಿ, ಅರ್ಜಿಯನ್ನು ಪರಿಭಾವಿತ ಭೂಪರಿವರ್ತನೆ (Deemed Conversion) ಎಂದು ಪರಿಗಣಿಸಿ, ತಂತ್ರಾಂಶದ ಮೂಲಕ ಸ್ವಯಂಚಾಲಿತ ಅನುಮೋದನೆ ನೀಡಲಾಗುತ್ತದೆ.

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ತಾಲ್ಲೂಕು ತಹಶೀಲ್ದಾರರು, ಅರಣ್ಯ ಇಲಾಖೆ ಮೊದಲಾದ ಸಂಬಂಧಪಟ್ಟ ಇಲಾಖೆಗಳು ಅಭಿಪ್ರಾಯ ನೀಡಲು 15 ದಿನಗಳ ಕಾಲಾವಕಾಶವಿದ್ದು, ಜಿಲ್ಲಾಧಿಕಾರಿಗಳ ಕಛೇರಿ ವಿಷಯ ನಿರ್ವಾಹಕರಿಗೆ 5 ದಿನಗಳು, ಅಪರ ಜಿಲ್ಲಾಧಿಕಾರಿಗಳಿಗೆ 5 ದಿನಗಳು ಹಾಗೂ ಜಿಲ್ಲಾಧಿಕಾರಿಗಳಿಗೆ 5 ದಿನಗಳ ಕಾಲಾವಕಾಶ ಇರುತ್ತದೆ. ಒಟ್ಟು 30 ಕೆಲಸದ ದಿನಗಳಲ್ಲಿ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳದಿದ್ದರೆ, ಸದರಿ ಭೂಪರಿವರ್ತನಾ ಅರ್ಜಿಗೆ ಅನುಮೋದನೆ ಇದೆ ಎಂದು ಪರಿಗಣಿಸಿ, ಶುಲ್ಕ ಪಾವತಿಗಾಗಿ ಅರ್ಜಿದಾರರ ಲಾಗಿನ್ ಗೆ ವರ್ಗಾವಣೆಯಾಗುತ್ತದೆ.

ಶುಲ್ಕ ಪಾವತಿಯಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಭೂಪರಿವರ್ತನೆ ಆದೇಶ ಸೃಜಿಸಲಾಗುತ್ತದೆ ಎಂದು ಕಂದಾಯ ಆಯುಕ್ತೆ ಮೀನಾ ನಾಗರಾಜ್ ಅವರಿಂದ ಡಿಜಿಟಲ್ ಸಹಿ ಮಾಡಲಾದ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ತಹಶೀಲ್ದಾರರಿಗೆ ಮಾಹಿತಿ ಮತ್ತು ಅಗತ್ಯ ಕ್ರಮಕಾಗಿ ಕಳುಹಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳು 2025ರ ಡಿಸೆಂಬರ್ 23ರಿಂದ ಜಾರಿಯಲ್ಲಿದ್ದು, ಭೂಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವುದು, ಪಾರದರ್ಶಕತೆ ಹೆಚ್ಚಿಸುವುದು ಮತ್ತು ತಂತ್ರಜ್ಞಾನ ಆಧಾರಿತ ಅನುಮೋದನೆ ವ್ಯವಸ್ಥೆಯನ್ನು ಅಳವಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

Ramesh Babu

Journalist

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

2 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

4 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

15 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

20 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

22 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

23 hours ago