ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ರವರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ “080-29787450” ಅಥವಾ ಟೋಲ್ ಫ್ರೀ ದೂರವಾಣಿ ಸಂಖ್ಯೆ: 18004255273 ಗಳಿಗೆ ಕರೆಮಾಡಿ ತಿಳಿಸಬಹುದಾಗಿದೆ.

ಜೊತೆಗೆ ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಗಳ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ ಎನ್.ಹೆಚ್( 9449597036), ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಬಸಪ್ಪ ಪೂಜಾರ್(9449597034), ನೆಲಮಂಗಲ ವಲಯದ ಅಬಕಾರಿ ನಿರೀಕ್ಷಕರಾದ ಸುಮಲತಾ ಸಿ.ಕೆ(9449597271), ದೊಡ್ಡಬಳ್ಳಾಪುರ ವಲಯದ ಅಬಕಾರಿ ನಿರೀಕ್ಷಕರಾದ ಅರುಣ್ ಕುಮಾರ್ ವಿ(9449597269), ದೇವನಹಳ್ಳಿ ವಲಯದ ಅಬಕಾರಿ ನಿರೀಕ್ಷಕರಾದ ಸುನಿಲ್ ಬಿ.ಎಂ(9449597268), ಹೊಸಕೋಟೆ ವಲಯದ ಅಬಕಾರಿ ನಿರೀಕ್ಷಕರಾದ ಶೈಲಜಾ ಹೆಚ್.ಆರ್(9449597270), ನೆಲಮಂಗಲ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಟಿ.ಜೆ ದಿವ್ಯಶ್ರೀ(9449597037), ಹೊಸಕೋಟೆ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಭರತ್ ಜಿ.ಎನ್(9449597035), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರಾದ ಆಶಿಷ್ ಎನ್(9449597031) ಇವರನ್ನು ಸಂಪರ್ಕಿಸಿ ಸಾರ್ವಜನಿಕರು ದೂರು/ಮಾಹಿತಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

8 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

11 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago