ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ರವರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ “080-29787450” ಅಥವಾ ಟೋಲ್ ಫ್ರೀ ದೂರವಾಣಿ ಸಂಖ್ಯೆ: 18004255273 ಗಳಿಗೆ ಕರೆಮಾಡಿ ತಿಳಿಸಬಹುದಾಗಿದೆ.

ಜೊತೆಗೆ ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಗಳ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ ಎನ್.ಹೆಚ್( 9449597036), ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಬಸಪ್ಪ ಪೂಜಾರ್(9449597034), ನೆಲಮಂಗಲ ವಲಯದ ಅಬಕಾರಿ ನಿರೀಕ್ಷಕರಾದ ಸುಮಲತಾ ಸಿ.ಕೆ(9449597271), ದೊಡ್ಡಬಳ್ಳಾಪುರ ವಲಯದ ಅಬಕಾರಿ ನಿರೀಕ್ಷಕರಾದ ಅರುಣ್ ಕುಮಾರ್ ವಿ(9449597269), ದೇವನಹಳ್ಳಿ ವಲಯದ ಅಬಕಾರಿ ನಿರೀಕ್ಷಕರಾದ ಸುನಿಲ್ ಬಿ.ಎಂ(9449597268), ಹೊಸಕೋಟೆ ವಲಯದ ಅಬಕಾರಿ ನಿರೀಕ್ಷಕರಾದ ಶೈಲಜಾ ಹೆಚ್.ಆರ್(9449597270), ನೆಲಮಂಗಲ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಟಿ.ಜೆ ದಿವ್ಯಶ್ರೀ(9449597037), ಹೊಸಕೋಟೆ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಭರತ್ ಜಿ.ಎನ್(9449597035), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರಾದ ಆಶಿಷ್ ಎನ್(9449597031) ಇವರನ್ನು ಸಂಪರ್ಕಿಸಿ ಸಾರ್ವಜನಿಕರು ದೂರು/ಮಾಹಿತಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

9 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago