ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ರವರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ “080-29787450” ಅಥವಾ ಟೋಲ್ ಫ್ರೀ ದೂರವಾಣಿ ಸಂಖ್ಯೆ: 18004255273 ಗಳಿಗೆ ಕರೆಮಾಡಿ ತಿಳಿಸಬಹುದಾಗಿದೆ.

ಜೊತೆಗೆ ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಗಳ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ ಎನ್.ಹೆಚ್( 9449597036), ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಬಸಪ್ಪ ಪೂಜಾರ್(9449597034), ನೆಲಮಂಗಲ ವಲಯದ ಅಬಕಾರಿ ನಿರೀಕ್ಷಕರಾದ ಸುಮಲತಾ ಸಿ.ಕೆ(9449597271), ದೊಡ್ಡಬಳ್ಳಾಪುರ ವಲಯದ ಅಬಕಾರಿ ನಿರೀಕ್ಷಕರಾದ ಅರುಣ್ ಕುಮಾರ್ ವಿ(9449597269), ದೇವನಹಳ್ಳಿ ವಲಯದ ಅಬಕಾರಿ ನಿರೀಕ್ಷಕರಾದ ಸುನಿಲ್ ಬಿ.ಎಂ(9449597268), ಹೊಸಕೋಟೆ ವಲಯದ ಅಬಕಾರಿ ನಿರೀಕ್ಷಕರಾದ ಶೈಲಜಾ ಹೆಚ್.ಆರ್(9449597270), ನೆಲಮಂಗಲ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಟಿ.ಜೆ ದಿವ್ಯಶ್ರೀ(9449597037), ಹೊಸಕೋಟೆ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಭರತ್ ಜಿ.ಎನ್(9449597035), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರಾದ ಆಶಿಷ್ ಎನ್(9449597031) ಇವರನ್ನು ಸಂಪರ್ಕಿಸಿ ಸಾರ್ವಜನಿಕರು ದೂರು/ಮಾಹಿತಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

5 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

7 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

10 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago