ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ರವರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ “080-29787450” ಅಥವಾ ಟೋಲ್ ಫ್ರೀ ದೂರವಾಣಿ ಸಂಖ್ಯೆ: 18004255273 ಗಳಿಗೆ ಕರೆಮಾಡಿ ತಿಳಿಸಬಹುದಾಗಿದೆ.

ಜೊತೆಗೆ ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಗಳ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ ಎನ್.ಹೆಚ್( 9449597036), ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಬಸಪ್ಪ ಪೂಜಾರ್(9449597034), ನೆಲಮಂಗಲ ವಲಯದ ಅಬಕಾರಿ ನಿರೀಕ್ಷಕರಾದ ಸುಮಲತಾ ಸಿ.ಕೆ(9449597271), ದೊಡ್ಡಬಳ್ಳಾಪುರ ವಲಯದ ಅಬಕಾರಿ ನಿರೀಕ್ಷಕರಾದ ಅರುಣ್ ಕುಮಾರ್ ವಿ(9449597269), ದೇವನಹಳ್ಳಿ ವಲಯದ ಅಬಕಾರಿ ನಿರೀಕ್ಷಕರಾದ ಸುನಿಲ್ ಬಿ.ಎಂ(9449597268), ಹೊಸಕೋಟೆ ವಲಯದ ಅಬಕಾರಿ ನಿರೀಕ್ಷಕರಾದ ಶೈಲಜಾ ಹೆಚ್.ಆರ್(9449597270), ನೆಲಮಂಗಲ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಟಿ.ಜೆ ದಿವ್ಯಶ್ರೀ(9449597037), ಹೊಸಕೋಟೆ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಭರತ್ ಜಿ.ಎನ್(9449597035), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರಾದ ಆಶಿಷ್ ಎನ್(9449597031) ಇವರನ್ನು ಸಂಪರ್ಕಿಸಿ ಸಾರ್ವಜನಿಕರು ದೂರು/ಮಾಹಿತಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago