ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ರವರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಬಕಾರಿ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ “080-29787450” ಅಥವಾ ಟೋಲ್ ಫ್ರೀ ದೂರವಾಣಿ ಸಂಖ್ಯೆ: 18004255273 ಗಳಿಗೆ ಕರೆಮಾಡಿ ತಿಳಿಸಬಹುದಾಗಿದೆ.
ಜೊತೆಗೆ ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಗಳ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಪರಮೇಶ್ವರಪ್ಪ ಎನ್.ಹೆಚ್( 9449597036), ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಬಸಪ್ಪ ಪೂಜಾರ್(9449597034), ನೆಲಮಂಗಲ ವಲಯದ ಅಬಕಾರಿ ನಿರೀಕ್ಷಕರಾದ ಸುಮಲತಾ ಸಿ.ಕೆ(9449597271), ದೊಡ್ಡಬಳ್ಳಾಪುರ ವಲಯದ ಅಬಕಾರಿ ನಿರೀಕ್ಷಕರಾದ ಅರುಣ್ ಕುಮಾರ್ ವಿ(9449597269), ದೇವನಹಳ್ಳಿ ವಲಯದ ಅಬಕಾರಿ ನಿರೀಕ್ಷಕರಾದ ಸುನಿಲ್ ಬಿ.ಎಂ(9449597268), ಹೊಸಕೋಟೆ ವಲಯದ ಅಬಕಾರಿ ನಿರೀಕ್ಷಕರಾದ ಶೈಲಜಾ ಹೆಚ್.ಆರ್(9449597270), ನೆಲಮಂಗಲ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಟಿ.ಜೆ ದಿವ್ಯಶ್ರೀ(9449597037), ಹೊಸಕೋಟೆ ಉಪವಿಭಾಗದ ಅಬಕಾರಿ ನಿರೀಕ್ಷಕರಾದ ಭರತ್ ಜಿ.ಎನ್(9449597035), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕರಾದ ಆಶಿಷ್ ಎನ್(9449597031) ಇವರನ್ನು ಸಂಪರ್ಕಿಸಿ ಸಾರ್ವಜನಿಕರು ದೂರು/ಮಾಹಿತಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಬಕಾರಿ ಉಪ ಆಯುಕ್ತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…