Categories: ಉಡುಪಿ

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆದಿತ್ತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಅಲ್ಲದೇ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ. ರೂ. 3,95,941 ನಗದು ರೂ. 1,47,50,506 ಮೌಲ್ಯದ ಚಿನ್ನಾಭರಣ, ರೂ. 17,00,000 ಮೌಲ್ಯದ ವಾಹನಗಳು, ರೂ. 25,75,000 ಮೌಲ್ಯದ ಬ್ಯಾಂಕ್ ಠೇವಣಿ, ರೂ. 72,68,554 ಮೌಲ್ಯದ ಇತರ ವಸ್ತುಗಳು ಇವೆಲ್ಲವನ್ನು ಸೇರಿಸಿ ರೂ.2,66,90,001 ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ಸೇರಿಸಿ ಒಟ್ಟು ರೂ.8,69,54,717 ಮೌಲ್ಯದ ಆಸ್ತಿ ಪತ್ತೆಯಾಗಿದೆ.

Ramesh Babu

Journalist

Share
Published by
Ramesh Babu

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago