ಅಬಾಕಸ್ ಸ್ಪರ್ಧೆಯಲ್ಲಿ ನ್ಯಾಷನಲ್ ಚಾಂಪಿಯನ್ ಆದ ಸರ್ಕಾರಿ ಶಾಲಾ ವಿದ್ಯಾರ್ಥಿ

ಚೆನ್ನೈನ ಟ್ರೇಡ್ ಸೆಂಟರ್ ನಲ್ಲಿ ನಡೆದ 42ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆದ ನಗರದ ಎಲೆಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿ ವಸಂತ್.ಎಸ್ ಚಾಂಪಿಯನ್ ಆಗಿ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಅವರು ಶುಭಾಶಯ ಕೋರಿ, ಅಭಿನಂದನೆ ಸಲ್ಲಿಸಿದರು.

ನಗರಸಭೆಯಲ್ಲಿ ಪೌರಕಾರ್ಮಿರಾಗಿ ಕೆಲಸ ಮಾಡುತ್ತಿರುವ ಸುಬ್ಬು ಮತ್ತು ಮಂಜಮ್ಮ ಅವರ ಪುತ್ರ ವಸಂತ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಸೆಪ್ಟೆಂಬರ್ 10 ರಂದು ಚೆನ್ನೈ ನಗರದಲ್ಲಿ ಆಯೋಜಿಸಲಾಗಿದ್ದ 42ನೇ ರಾಷ್ಟ್ರೀಯ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಸಂತ್.ಎಸ್ ಅಬಾಕಸ್‌ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

ವಿವಿಧ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ರಾಷ್ಟ್ರೀಯ ಸ್ಪರ್ಧೆಯಲ್ಲಿ B4 ಚಾಂಪಿಯನ್ ಸ್ಥಾನ ಪಡೆದ ವಸಂತ್.

ಈ ವೇಳೆ ಬಿಇಒ ರಂಗಪ್ಪ ಮಾತನಾಡಿ, ನಮ್ಮ ನಗರದ ಎಲೆಪೇಟೆ ಸರ್ಕಾರಿ ಶಾಲೆಯ ಬಾಲಕ ಚೆನೈ ನಲ್ಲಿ ನಡೆದ  ರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಉನ್ನತವಾದ ದರ್ಜೆ ಪಡೆದು ಬಂದಿದ್ದಾನೆ, ಅಪರೂಪವಾದ ಇಂತಹ ಮಕ್ಕಳು ನಮ್ಮ ಇಲಾಖೆಗೆ ಹೆಮ್ಮೆಯಾಗಿದ್ದು ವಿದ್ಯಾರ್ಥಿ ಮತ್ತು ಅವರ ತಂದೆ ತಾಯಿ ಹಾಗೂ ಶಾಲೆಯ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು ತಿಳಿಸುತ್ತೇನೆ ಎಂದರು.

ಮುಖ್ಯಶಿಕ್ಷಕ ನರಸೇಗೌಡ ಮಾತನಾಡಿ, ನಮ್ಮ ಸರ್ಕಾರಿ ಶಾಲೆಯ ಮಗು ರಾಷ್ಟ್ರೀಯ ಮಟ್ಟದ ಅಬಾಕಸ್‌ನಲ್ಲಿ ಚಾಂಪಿಯನ್ ಆಗಿ ನಮ್ಮ ಶಾಲೆಗೆ ಕೀರ್ತಿ ತಂದಿದ್ದಾನೆ, ವಸಂತ್ ಇನ್ನೂ ಉನ್ನತ ಮಟ್ಟದ ಶಿಕ್ಷಣ ಪಡೆದ ಸಮಾಜದಲ್ಲಿ ಉನ್ನತವಾದ ವ್ಯಕ್ತಿಯಾಗಲಿ ಎಂಬುದು ನಮ್ಮ ಆಶಯ ಎಂದರು.

ವಿದ್ಯಾರ್ಥಿ ವಸಂತ್ ಮಾತನಾಡಿ, ನಮ್ಮ ತಂದೆ ತಾಯಿ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದು ನನ್ನ ಶಿಕ್ಷಣದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಾರೆ, ಉಷಾ ಮೇಡಂ ಬಳಿ ತರಬೇತಿ ಪಡೆಯುತ್ತಿದ್ದೇನೆ, ನಮ್ಮ ಶಾಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಕಲಿಸಿಕೊಡುತ್ತಾರೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ ಎಂದರು

ಈ ವೇಳೆ ಬಿಆರ್‌ಪಿ ಶ್ರೀಕಾಂತ್, ಸಹ ಶಿಕ್ಷಕರಾದ ಅಶೋಕ್, ನೀಲಾಂಭಿಕೆ, ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago