ಅಬಾಕಸ್ ಸ್ಪರ್ಧೆಯಲ್ಲಿ ನ್ಯಾಷನಲ್ ಚಾಂಪಿಯನ್ ಆದ ಸರ್ಕಾರಿ ಶಾಲಾ ವಿದ್ಯಾರ್ಥಿ

ಚೆನ್ನೈನ ಟ್ರೇಡ್ ಸೆಂಟರ್ ನಲ್ಲಿ ನಡೆದ 42ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆದ ನಗರದ ಎಲೆಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿ ವಸಂತ್.ಎಸ್ ಚಾಂಪಿಯನ್ ಆಗಿ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಅವರು ಶುಭಾಶಯ ಕೋರಿ, ಅಭಿನಂದನೆ ಸಲ್ಲಿಸಿದರು.

ನಗರಸಭೆಯಲ್ಲಿ ಪೌರಕಾರ್ಮಿರಾಗಿ ಕೆಲಸ ಮಾಡುತ್ತಿರುವ ಸುಬ್ಬು ಮತ್ತು ಮಂಜಮ್ಮ ಅವರ ಪುತ್ರ ವಸಂತ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಸೆಪ್ಟೆಂಬರ್ 10 ರಂದು ಚೆನ್ನೈ ನಗರದಲ್ಲಿ ಆಯೋಜಿಸಲಾಗಿದ್ದ 42ನೇ ರಾಷ್ಟ್ರೀಯ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಸಂತ್.ಎಸ್ ಅಬಾಕಸ್‌ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

ವಿವಿಧ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ರಾಷ್ಟ್ರೀಯ ಸ್ಪರ್ಧೆಯಲ್ಲಿ B4 ಚಾಂಪಿಯನ್ ಸ್ಥಾನ ಪಡೆದ ವಸಂತ್.

ಈ ವೇಳೆ ಬಿಇಒ ರಂಗಪ್ಪ ಮಾತನಾಡಿ, ನಮ್ಮ ನಗರದ ಎಲೆಪೇಟೆ ಸರ್ಕಾರಿ ಶಾಲೆಯ ಬಾಲಕ ಚೆನೈ ನಲ್ಲಿ ನಡೆದ  ರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಉನ್ನತವಾದ ದರ್ಜೆ ಪಡೆದು ಬಂದಿದ್ದಾನೆ, ಅಪರೂಪವಾದ ಇಂತಹ ಮಕ್ಕಳು ನಮ್ಮ ಇಲಾಖೆಗೆ ಹೆಮ್ಮೆಯಾಗಿದ್ದು ವಿದ್ಯಾರ್ಥಿ ಮತ್ತು ಅವರ ತಂದೆ ತಾಯಿ ಹಾಗೂ ಶಾಲೆಯ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು ತಿಳಿಸುತ್ತೇನೆ ಎಂದರು.

ಮುಖ್ಯಶಿಕ್ಷಕ ನರಸೇಗೌಡ ಮಾತನಾಡಿ, ನಮ್ಮ ಸರ್ಕಾರಿ ಶಾಲೆಯ ಮಗು ರಾಷ್ಟ್ರೀಯ ಮಟ್ಟದ ಅಬಾಕಸ್‌ನಲ್ಲಿ ಚಾಂಪಿಯನ್ ಆಗಿ ನಮ್ಮ ಶಾಲೆಗೆ ಕೀರ್ತಿ ತಂದಿದ್ದಾನೆ, ವಸಂತ್ ಇನ್ನೂ ಉನ್ನತ ಮಟ್ಟದ ಶಿಕ್ಷಣ ಪಡೆದ ಸಮಾಜದಲ್ಲಿ ಉನ್ನತವಾದ ವ್ಯಕ್ತಿಯಾಗಲಿ ಎಂಬುದು ನಮ್ಮ ಆಶಯ ಎಂದರು.

ವಿದ್ಯಾರ್ಥಿ ವಸಂತ್ ಮಾತನಾಡಿ, ನಮ್ಮ ತಂದೆ ತಾಯಿ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದು ನನ್ನ ಶಿಕ್ಷಣದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಾರೆ, ಉಷಾ ಮೇಡಂ ಬಳಿ ತರಬೇತಿ ಪಡೆಯುತ್ತಿದ್ದೇನೆ, ನಮ್ಮ ಶಾಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಕಲಿಸಿಕೊಡುತ್ತಾರೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ ಎಂದರು

ಈ ವೇಳೆ ಬಿಆರ್‌ಪಿ ಶ್ರೀಕಾಂತ್, ಸಹ ಶಿಕ್ಷಕರಾದ ಅಶೋಕ್, ನೀಲಾಂಭಿಕೆ, ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

20 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago