ಅಬಾಕಸ್ ಸ್ಪರ್ಧೆಯಲ್ಲಿ ನ್ಯಾಷನಲ್ ಚಾಂಪಿಯನ್ ಆದ ಸರ್ಕಾರಿ ಶಾಲಾ ವಿದ್ಯಾರ್ಥಿ

ಚೆನ್ನೈನ ಟ್ರೇಡ್ ಸೆಂಟರ್ ನಲ್ಲಿ ನಡೆದ 42ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆದ ನಗರದ ಎಲೆಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿ ವಸಂತ್.ಎಸ್ ಚಾಂಪಿಯನ್ ಆಗಿ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಅವರು ಶುಭಾಶಯ ಕೋರಿ, ಅಭಿನಂದನೆ ಸಲ್ಲಿಸಿದರು.

ನಗರಸಭೆಯಲ್ಲಿ ಪೌರಕಾರ್ಮಿರಾಗಿ ಕೆಲಸ ಮಾಡುತ್ತಿರುವ ಸುಬ್ಬು ಮತ್ತು ಮಂಜಮ್ಮ ಅವರ ಪುತ್ರ ವಸಂತ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಸೆಪ್ಟೆಂಬರ್ 10 ರಂದು ಚೆನ್ನೈ ನಗರದಲ್ಲಿ ಆಯೋಜಿಸಲಾಗಿದ್ದ 42ನೇ ರಾಷ್ಟ್ರೀಯ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಸಂತ್.ಎಸ್ ಅಬಾಕಸ್‌ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

ವಿವಿಧ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ರಾಷ್ಟ್ರೀಯ ಸ್ಪರ್ಧೆಯಲ್ಲಿ B4 ಚಾಂಪಿಯನ್ ಸ್ಥಾನ ಪಡೆದ ವಸಂತ್.

ಈ ವೇಳೆ ಬಿಇಒ ರಂಗಪ್ಪ ಮಾತನಾಡಿ, ನಮ್ಮ ನಗರದ ಎಲೆಪೇಟೆ ಸರ್ಕಾರಿ ಶಾಲೆಯ ಬಾಲಕ ಚೆನೈ ನಲ್ಲಿ ನಡೆದ  ರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಉನ್ನತವಾದ ದರ್ಜೆ ಪಡೆದು ಬಂದಿದ್ದಾನೆ, ಅಪರೂಪವಾದ ಇಂತಹ ಮಕ್ಕಳು ನಮ್ಮ ಇಲಾಖೆಗೆ ಹೆಮ್ಮೆಯಾಗಿದ್ದು ವಿದ್ಯಾರ್ಥಿ ಮತ್ತು ಅವರ ತಂದೆ ತಾಯಿ ಹಾಗೂ ಶಾಲೆಯ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು ತಿಳಿಸುತ್ತೇನೆ ಎಂದರು.

ಮುಖ್ಯಶಿಕ್ಷಕ ನರಸೇಗೌಡ ಮಾತನಾಡಿ, ನಮ್ಮ ಸರ್ಕಾರಿ ಶಾಲೆಯ ಮಗು ರಾಷ್ಟ್ರೀಯ ಮಟ್ಟದ ಅಬಾಕಸ್‌ನಲ್ಲಿ ಚಾಂಪಿಯನ್ ಆಗಿ ನಮ್ಮ ಶಾಲೆಗೆ ಕೀರ್ತಿ ತಂದಿದ್ದಾನೆ, ವಸಂತ್ ಇನ್ನೂ ಉನ್ನತ ಮಟ್ಟದ ಶಿಕ್ಷಣ ಪಡೆದ ಸಮಾಜದಲ್ಲಿ ಉನ್ನತವಾದ ವ್ಯಕ್ತಿಯಾಗಲಿ ಎಂಬುದು ನಮ್ಮ ಆಶಯ ಎಂದರು.

ವಿದ್ಯಾರ್ಥಿ ವಸಂತ್ ಮಾತನಾಡಿ, ನಮ್ಮ ತಂದೆ ತಾಯಿ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದು ನನ್ನ ಶಿಕ್ಷಣದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಾರೆ, ಉಷಾ ಮೇಡಂ ಬಳಿ ತರಬೇತಿ ಪಡೆಯುತ್ತಿದ್ದೇನೆ, ನಮ್ಮ ಶಾಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಕಲಿಸಿಕೊಡುತ್ತಾರೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ ಎಂದರು

ಈ ವೇಳೆ ಬಿಆರ್‌ಪಿ ಶ್ರೀಕಾಂತ್, ಸಹ ಶಿಕ್ಷಕರಾದ ಅಶೋಕ್, ನೀಲಾಂಭಿಕೆ, ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago