ಅಭಿವೃದ್ಧಿ ಪಥದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ-ಶಾಸಕ ಧೀರಜ್‌ಮುನಿರಾಜ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸುವ ಮೂಲಕ 9 ವರ್ಷದ ಅವಧಿಯನ್ನು ಪೂರ್ಣಗೊಳಿಸಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ 9 ವರ್ಷದ ಆಡಳಿತದಲ್ಲಿ ಹಲವಾರು ಕಾರ್ಯಕ್ರಮಗಳು, ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನಪರ ಆಡಳಿತವನ್ನು ನೀಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಡಿ ಭಾರತೀಯ ಸೇನೆ ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಸೇನೆಯಾಗಿದೆ. ಅಂತಾರಾಷ್ಟ್ರೀಯ ಸಂಬಂಧಗಳು ವೃದ್ಧಿಸಿವೆ. ಹತ್ತಾರು ಸಂಕಷ್ಟದ ಸಮಯದಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿದೆ.

ಮಹಾಮಾರಿ ಕೊವಿಡ್ ಕಾಲದಲ್ಲಿಯೂ ವಿಶ್ವದಲ್ಲಿಯೆ ಅತ್ಯಂತ ಹೆಚ್ಚು ಯಶಸ್ವಿಯಾಗಿ ಎದುರಿಸಲಾಗಿದೆ. ಕ್ರಾಂತಿಯ ರೀತಿಯಲ್ಲಿ ಕೊರೊನಾವನ್ನು ಸದೆಬಡಿಯಲಾಗಿದೆ. ಹಲವು ವರ್ಷಗಳ ಬಳಿಕ ಜಲಜೀವನ್ ಯೋಜನೆ ಮುಖಾಂತರ ಪ್ರತಿ ಮನೆ ಮನೆಗೆ ನೀರಿನ ಸೌಲಭ್ಯ ನೀಡಲಾಗಿದೆ. ಎನ್ಇಪಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆ ಮಾಡಿದೆ ಎಂದರು.

ಈ ವೇಳೆ ಜಿಲ್ಲಾ ವಕ್ತಾರೆ ಪುಷ್ಪಶಿವಶಂಕರ್, ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಜಿಲ್ಲಾ ಕಾರ್ಯದರ್ಶಿ ಗೋಪಿನಾಥ್, ನಗರಸಭಾ ಸದಸ್ಯ ವೆಂಕಟೇಶ್, ಡಾ. ನಾರಾಯಣ್ ಇದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

28 minutes ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

9 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

13 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

22 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago