Categories: ಲೇಖನ

ಅಭಿವೃದ್ಧಿ………..

ಒಂದು ದೇಶದ ಅಭಿವೃದ್ಧಿಯೆಂಬ ವಜ್ರಖಚಿತ ಕಿರೀಟದ ಮುತ್ತುಗಳು,…………..

ಆ ದೇಶ ಬಾಹ್ಯಾಕಾಶಕ್ಕೆ ಹಾರಿಸಿದ ಸ್ಯಾಟಲೈಟ್ ಗಳು ಮತ್ತು ಅದರ ಪರಿಣಾಮ,

ಆ ದೇಶದಲ್ಲಿ ಇರುವ ಶ್ರೀಮಂತರ ಸಂಖ್ಯೆ,

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಹೊಂದಿರುವ ಸ್ಥಾನ,

ಆ ದೇಶದಲ್ಲಿ ಇರಬಹುದಾದ ವಿಶ್ವ ಶ್ರೇಷ್ಠ ಭವ್ಯ ಕಟ್ಟಡಗಳು,

ಆ ದೇಶ ವಿಶ್ವ ದರ್ಜೆಯ ಕ್ರೀಡಾಕೂಟದಲ್ಲಿ ಗಳಿಸುವ ಪದಕಗಳು,

ಅದು ಹೊಂದಿರಬಹುದಾದ ವಿಮಾನ ನಿಲ್ದಾಣಗಳ ಸಂಖ್ಯೆ,

ಆ ದೇಶದಲ್ಲಿ ಚಲಿಸುವ ಬುಲೆಟ್ ರೈಲುಗಳ ವೇಗ,

ಅಲ್ಲಿ ಇರಬಹುದಾದ 5 ಸ್ಟಾರ್, 7 ಸ್ಟಾರ್ ಹೋಟೆಲ್ ಗಳ ಸಂಖ್ಯೆ,

ಅಲ್ಲಿ ಓಡಾಡುವ ಕಾರುಗಳ ವೈಭವೋಪೇತ ಮೆರವಣಿಗೆ,

ಅಲ್ಲಿನ ರಾಜಕೀಯ ನೇತಾರರ ಶ್ರೀಮಂತ ಜೀವನ ಶ್ಯೆಲಿ,

ಸ್ಮಾರ್ಟ್ ಸಿಟಿ, ಸ್ಮಾರ್ಟ್ ವಿಲೇಜ್,
ಡಿಜಿಟಲ್ ಆಡಳಿತ
ಇತ್ಯಾದಿಗಳು,

ಇನ್ನೊಂದೆಡೆ,

ಒಂದು ದೇಶದ ಬಡತನವೆಂಬ ತಗಡು ಕಿರೀಟದ ಹರಳುಗಳು………..

ಊಟಕ್ಕೇ ಇಲ್ಲದೆ ಕೆಲವರು ಆಗಾಗ ಹಸಿವಿನಿಂದ ಸಾಯುವುದು,

ಪೌಷ್ಟಿಕಾಂಶದ ಕೊರತೆಯಿಂದ ಅನೇಕ ಮಕ್ಕಳು ನರಳುತ್ತಿರುವುದು,

ಇನ್ನೂ ನೀರು, ವಿದ್ಯುತ್‌, ರಸ್ತೆಗಳ ಸೌಕರ್ಯವಿಲ್ಲದ ಹಳ್ಳಿಗಳು,

ಆಗಾಗ ಪ್ರತಿಭಟನೆ, ಮುಷ್ಕರ, ಬಂದ್ ಗಳು,

ಇಲ್ಲಿನ ಕೋರ್ಟುಗಳಲ್ಲಿ ದಾಖಲಾಗಿರುವ ಕೇಸುಗಳು,

ತುಂಬಿ ತುಳುಕುವ ಆಸ್ಪತ್ರೆ, ಜೈಲುಗಳು,

ಬೀದಿ ಬದಿಯಲ್ಲಿಯೇ ಸಂಸಾರ ಸಾಗಿಸುವ ಕುಟುಂಬಗಳು,

ಇಲ್ಲಿರುವ ವೃದ್ದಾಶ್ರಮ, ಅನಾಥಾಶ್ರಮಗಳ ಸಂಖ್ಯೆ,

ಹೆಣ ಸುಡಲೂ ಕೊಡಬೇಕಾದ ಲಂಚ,

ಇಲ್ಲಿ ದಾಖಲಾಗುವ ಅತ್ಯಾಚಾರ, ಕೊಲೆ, ಕಳ್ಳತನ, ವಂಚನೆಗಳ ಸಂಖ್ಯೆ,

ಓಟಿಗಾಗಿ ಜನಗಳು ಸಲ್ಲಿಸುವ ಹಣದ ಬೇಡಿಕೆ,

ಇಲ್ಲಿನ ರಸ್ತಗಳಿಂದಾಗುವ ಅಪಘಾತಗಳ ಸಾವು, ನೋವು,
ಇತ್ಯಾದಿಗಳು.

ಈಗ ಆಯ್ಕೆ ನಿಮ್ಮದೇ ……

ನಮ್ಮ ದೇಶ ಭಾರತ,
ವಜ್ರಖಚಿತ ಕಿರೀಟದ ಅಸಲಿ ರಾಷ್ಟ್ರವೇ ?
ಅಥವಾ
ತಗಡಿನ ಕಿರೀಟದ ನಕಲಿ ಹರಳುಗಳೇ ಇರುವ ರಾಷ್ಟ್ರವೇ ?

ಆತ್ಮವಂಚನೆ ಮಾಡಿಕೊಳ್ಳದೇ ಉತ್ತರಿಸಿಕೊಳ್ಳಿ………

ಎರಡೂ ಇದೆ ಎಂಬುವವರಿಗೆ ನಾವು ಈಗ ಹೆಚ್ಚಾಗಿ ಗಮನಹರಿಸಬೇಕಾದದ್ದು ಯಾವ ಕಡೆ ಎಂಬ ಪ್ರಶ್ನೆಯೂ ಬರುತ್ತದೆ.

ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂಬ ಬಲಪಂಥೀಯ ಚಿಂತನೆಗಳು, ದೇಶ ತೀರಾ ಅಧೋಗತಿಗೆ ಇಳಿಯುತ್ತಿದೆ ಎಂಬ ಎಡಪಂಥೀಯ ಚಿಂತನೆಗಳು ವಾಸ್ತವಕ್ಕೆ ಹತ್ತಿರವಾಗಿರುವುದಿಲ್ಲ,

ಜನಸಂಖ್ಯೆಯ ಆಧಾರದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದರೆ ಆ ದೇಶ ಇನ್ನೂ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿಲ್ಲಾ ಎಂದೇ ಹೇಳಬೇಕು.

ಆಧುನಿಕತೆ ಬೆಳೆದಂತೆ ಅಪರಾಧಗಳು ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿಯ ದಾರಿ ತಪ್ಪಾಗಿದೆ ಎಂದೇ ಭಾವಿಸಬೇಕು.

ಅಕ್ಷರಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಮೋಸ, ವಂಚನೆ, ಭ್ರಷ್ಟಾಚಾರ ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿ ಅನುಮಾನಾಸ್ಪದವಾಗಿದೆ ಎಂದು ಊಹಿಸಬಹುದು.

ಆಸ್ಪತ್ರೆ, ಸಿಸಿ ಟಿವಿ, ಮೆಡಿಕಲ್ ಲ್ಯಾಬೋರೇಟರಿಗಳು, ಪೋಲೀಸ್ ಸ್ಟೇಷನ್ನುಗಳು ಹೆಚ್ಚಳವಾದಷ್ಟು ದೇಶದ ಅಭಿವೃದ್ಧಿ ಹಿಮ್ಮುಖವಾಗಿದೆ ಎಂದು ಅರ್ಥಮಾಡಿಕೊಳ್ಳಬೇಕು.

ಆಹಾರದ ಉತ್ಪಾದನೆ ಹೆಚ್ಚಾಗಿದ್ದರೂ ಅದರಲ್ಲಿ ಪೌಷ್ಟಿಕಾಂಶಕ್ಕೆ ಬದಲಾಗಿ ರಾಸಾಯನಿಕಗಳು, ಗಾಳಿಯಲ್ಲಿ ವಿಷಯುಕ್ತ ಅಂಶ, ನೀರಿನಲ್ಲಿ ಸಾಂಕ್ರಾಮಿಕ ರೋಗಗಳ ವೈರಸ್ ಗಳು ಹೆಚ್ಚಾಗಿದ್ದರೆ ಅದು ಅಪಾಯಕಾರಿ ಅಭಿವೃದ್ಧಿ ಎಂದೇ ಪರಿಗಣಿಸಬೇಕು.

ಅತ್ಯುತ್ತಮ ತಂತ್ರಜ್ಞಾನ, ಸಮೂಹ ಸಂಪರ್ಕ ಮಾಧ್ಯಮ, ರಸ್ತೆಗಳು, ಕಟ್ಟಡಗಳು, ವಾಹನಗಳು, ಶಿಕ್ಷಣ ಸಂಸ್ಥೆಗಳು ಇದ್ದರೂ ಮಾನವೀಯ ಮೌಲ್ಯಗಳು ಕುಸಿತ ಕಂಡು ಸಾಮಾಜಿಕ ಸ್ವಾಸ್ಥ್ಯ ಅಸಹನೆಯಿಂದ ಕೂಡಿದ್ದರೆ ಅದನ್ನು ತಪ್ಪಾಗಿ ಅರ್ಥೈಸಿದ ಕೆಟ್ಟ ಅಭಿವೃದ್ಧಿ ಎಂದೇ ತಿಳಿಯಬೇಕು.

ಅನ್ನ ಭಾಗ್ಯ, ಕ್ಷೀರ ಭಾಗ್ಯ, ಸಾಲ ಮನ್ನಾ, ಉಚಿತ ಗ್ಯಾಸ್ ಸಿಲಿಂಡರ್, ಚುನಾವಣೆಯಲ್ಲಿ ಹಣ, ಹೆಂಡ, ಸೀರೆ, ಪಂಚೆ, ಜಾತಿಗಳ ಅವಶ್ಯಕತೆ ಇನ್ನೂ ಇದೆ ಎಂದರೆ ನಾವು ತೀರಾ ಹಿಂದುಳಿದಿದ್ದೇವೇ ಎಂದೇ ಗ್ರಹಿಸಬೇಕು.

ಬುಲೆಟ್ ಟ್ರೈನ್, ಸ್ಮಾರ್ಟ್ ಸಿಟಿ, ಡಿಜಿಟಲ್‌ ವ್ಯವಹಾರ, ಅಂತರರಾಷ್ಟ್ರೀಯ ನಾಯಕತ್ವ ಮುಂತಾದ ವಿಷಯಗಳನ್ನು ನಾವು ಈ ಕ್ಷಣದಲ್ಲಿ ಸಂಭ್ರಮಿಸುತ್ತಿದ್ದೇವೆ ಎಂದರೆ ನಾವು ಆತ್ಮವಂಚನೆ ಮಾಡಿಕೊಂಡು ಅಭಿವೃದ್ಧಿಯ ಭ್ರಮೆಯಲ್ಲಿ ತೇಲುತ್ತಿದ್ದೇವೆ ಎಂದೇ ಮನವರಿಕೆ ಮಾಡಿಕೊಳ್ಳಬೇಕು.

ವ್ಯಾವಹಾರಿಕವಾಗಿ ಸೇವಾ ಕ್ಷೇತ್ರ ( Service Sector ) ಹೆಚ್ಚು ಅಭಿವೃದ್ಧಿ ಹೊಂದಿ, ಉತ್ಪಾದಕಾ ಕ್ಷೇತ್ರ ( Production Sector ) ಕುಸಿತ ಕಂಡರೆ ಭಾರತದಂತ ಬೃಹತ್ ದೇಶದ ಭವಿಷ್ಯ ಕಷ್ಟವಾಗುತ್ತದೆ ಎಂದು ಅರಿತುಕೊಳ್ಳಬೇಕು….

ಅಭಿವೃದ್ಧಿಯನ್ನು ಸಮಷ್ಟಿ ದೃಷ್ಟಿಕೋನದಿಂದ , ಎಲ್ಲಾ ವಿಭಾಗಗಳನ್ನು ಅಂದರೆ ವಸ್ತು ಮತ್ತು ವ್ಯಕ್ತಿತ್ವಗಳ ಬೆಳವಣಿಗೆಯನ್ನು ಒಟ್ಟಿಗೆ ಮತ್ತು ಸಮಾನಾಂತರವಾಗಿ ತೆಗೆದುಕೊಂಡು ಹೋದರೆ ಮಾತ್ರ ನಿಜದ ಅಭಿವೃದ್ಧಿ ಸಾಧ್ಯ. ಕೃಷಿ ಆಧಾರಿತ ಭಾರತದ ಅಭಿವೃದ್ಧಿ ಯಾವುದೋ ಒಂದು ಕ್ಷೇತ್ರದ ಬೆಳವಣಿಗೆಯಿಂದ ಸಾಧ್ಯವೇ ಇಲ್ಲ.

ಆದರೆ ನಮ್ಮ ದೇಶದ ಮೂಲಭೂತ ಸಮಸ್ಯೆಗಳಾದ ಅಪೌಷ್ಟಿಕತೆ, ಮೌಢ್ಯ, ಅಜ್ಞಾನ, ಹಿಂಸೆ, ತಾರತಮ್ಯ, ಭ್ರಷ್ಟಾಚಾರ, ಜಾತಿ ಪದ್ಧತಿ, ಹೆಣ್ಣಿನ ಮೇಲಿನ ದೌರ್ಜನ್ಯ ಇವುಗಳನ್ನು ಪರಿಗಣಗೆ ತೆಗೆದುಕೊಂಡರೆ ಖಂಡಿತವಾಗಲು ಭಾರತ ಸಾಕಷ್ಟು ಹಿಂದುಳಿದಿದೆ,

ತಾಂತ್ರಿಕವಾಗಿ ಮುಂದುವರೆಯುತ್ತಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ, ಆದರೆ ಮಾನವೀಯ ಮೌಲ್ಯಗಳ ವಿಷಯದಲ್ಲಿ ತೀರಾ ಕೆಳಹಂತಕ್ಕೆ ಜಾರುತ್ತಿರುವುದರಿಂದ ದೇಶದ ಅಭಿವೃದ್ಧಿಯ ಪರಿಕಲ್ಪನೆಯನ್ನು ಮತ್ತೊಮ್ಮೆ ಪುನರ್ ವಿಮರ್ಶಗೊಳಪಡಿಸಬೇಕಿದೆ…

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

14 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

23 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago