ಅಭ್ಯರ್ಥಿಗಳು ಗೆದ್ದ ಬಳಿಕ ಮರೆಯದೆ ಜನರಿಗೆ ಒಳ್ಳೆಯ ಕೆಲಸ ಮಾಡಬೇಕು. ಕ್ಷೇತ್ರ ಅಭಿವೃದ್ಧಿಗೆ ಶ್ರಮ ವಹಿಸಬೇಕು. ಜನರು ಮುಗ್ಧರಿದ್ದಾರೆ, ಗೆದ್ದ ಮೇಲೆ ಅವರಿಗೆ ಮೋಸ ಮಾಡಬೇಡಿ ಎಂದು ನಟ ಕಿಚ್ಚ ಸುದೀಪ್ ಅಭ್ಯರ್ಥಿಗಳಿಗೆ ಸೂಚಿಸಿದರು.
ನಗರದ ಶಾಂತಿನಗರದ ಮುತ್ಯಾಲಮ್ಮ ತಾಯಿ ದೇವಾಲಯದಿಂದ ಆರಂಭವಾದ ರೋಡ್ ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಕೊರೊನಾ ಸಂದರ್ಭದಿಂದ ಹಿಡಿದು ಇಲ್ಲಿಯವರೆಗೆ ಸಾಮಾಜಿಕ, ಆರೋಗ್ಯ, ಉದ್ಯೋಗ, ಶಿಕ್ಷಣ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಉತ್ಸಾಹಿ, ವಿದ್ಯಾವಂತ ಯುವಕ ಧೀರಜ್ ಮುನಿರಾಜರನ್ನು ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಯುವ ನಾಯಕರಿಗೆ ಈ ಬಾರಿ ಹೆಚ್ಚಿನ ಅವಕಾಶ ನೀಡಿರುವುದು ಒಳ್ಳೆಯ ಬೆಳವಣಿಗೆ. ವಿದ್ಯಾವಂತ ಯುವಕ ಧೀರಜ್ ಮುನಿರಾಜುಗೆ ಆಶೀರ್ವಾದ ಮಾಡಿ ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು.
ಸಚಿವ ಡಾ.ಸುಧಾಕರ್ ಮಾತನಾಡಿ
ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ 73 ಮಂದಿ ಹೊಸ ಯುವ ಮುಖಗಳಿಗೆ ಮಣೆ ಹಾಕಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಲಾಗುವುದು. ನೇಕಾರರ ಸಮುದಾಯಕ್ಕೆ ಹೆಚ್ಚು ಸೌಲಭ್ಯಗಳನ್ನು ನೀಡಿರುವುದು ಬಿಜೆಪಿ ಸರ್ಕಾರವಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ಗೌರವ ಸಲ್ಲಿಸಿದ್ದು, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ತಂದು 10 ಸಾವಿರ ಕೊಡಲಾಗುತ್ತಿದೆ. ಪ್ರತಿ ವರ್ಷ 52 ಲಕ್ಷ ರೈತರಿಗೆ ಹತ್ತು ಸಾವಿರ ಸಹಾಯಧನ ನೀಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಅಭಿವೃದ್ಧಿಗೆ ವೇಗ ನೀಡಬೇಕಾದರೆ ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಹೇಳಿದರು.
ಈ ವೇಳೆ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ನಗರಾಧ್ಯಕ್ಷ ಮುದ್ದಪ್ಪ, ತಾಲ್ಲೂಕು ಅಧ್ಯಕ್ಷ ನಾಗೇಶ್ ಸೇರಿದಂತೆ ಮತ್ತಿತರರು ಇದ್ದರು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…