Categories: ತುಮಕೂರು

ಅಮಲು ಬರಿಸುವ ಸುಮಾರು 56 ಸಾವಿರ ರೂ. ಬೆಲೆಬಾಳುವ 1700 ಮಾತ್ರೆಗಳ ವಶ: ಇಬ್ಬರು ಡ್ರಗ್ಸ್ ದಂಧೆಕೋರರ ಬಂಧನ

ಇತ್ತೀಚೆಗೆ ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಯುವ ಜನರಿಗೆ ವಿದ್ಯಾರ್ಥಿಗಳಿಗೆ ಯಾರೋ ಕೆಲವು ವ್ಯಕ್ತಿಗಳು ಕದ್ದು ಮುಚ್ಚಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುತ್ತಾರೆಂದು ದೂರು ಕೇಳಿಬಂದಿತ್ತು.

ದೂರಿನ ಮಾಹಿತಿ ಮೇರೆಗೆ ಈ ಡ್ರಗ್ಸ್ ದಂಧೆಕೋರರ ಸುಳಿವನ್ನು ಪತ್ತೆ ಮಾಡಿ ಅ.31ರಂದು ಡ್ರಗ್ಸ್ ದಂಧೆಕೋರರ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಸದಾಶಿವನಗರ ಬಡಾವಣೆಯ ರಸ್ತೆಯಲ್ಲಿ ಡ್ರಗ್ಸ್ ಮಾರಾಟದ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಅಬ್ದುಲ್ ಖಾದರ್, ಬೀರೇಶ್ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳ ಬಳಿ ಇದ್ದಂತಹ ಸುಮಾರು 56 ಸಾವಿರ ರೂ. ಬೆಲೆಬಾಳುವ ಅಮಲು ಬರಿಸುವ 1700 ಮಾತ್ರೆಗಳನ್ನು ಮತ್ತು ಒಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.

ಈ ಅಕ್ರಮ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಇತರೆ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಯುವ ಪೀಳಿಗೆ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಡ್ಡದಾರಿ ಹಿಡಿದು ಹಾಳಾಗುತ್ತಿದ್ದು ಹಾಗೂ ಇದರಿಂದ ಸಮಾಜದ ನೆಮ್ಮದಿ ಸ್ವಾಸ್ಥ ಹಾಳಾಗುತ್ತಿರುತ್ತದೆ. ಯುವಕರು ತಮ್ಮಲ್ಲಿರುವ ಅಗಾಧಶಕ್ತಿ, ಸಾಮರ್ಥ್ಯ, ಹೋರಾಟದ ಕೆಚ್ಚು, ಚೈತನ್ಯದ ಅರಿವಿಲ್ಲದೆ ಹಾಗೂ ತಮ್ಮ ಭವಿಷ್ಯದ ಚಿಂತನೆ, ಮುಂದಾಲೋಚನೆ ಮಾಡದೇ ತತ್‌ಕ್ಷಣದ ಸುಖ, ಸಂತೋಷ ಅನುಭವಿಸಲು ಪಾಶ್ಚಿಮಾತ್ಯ ಜೀವನ ಶೈಲಿಯ ಬೆನ್ನತ್ತಿ ಕೆಲ ಅಡ್ಡದಾರಿಗಳನ್ನು ತುಳಿದು ಮಾದಕ ವ್ಯಸನಗಳಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಅಲ್ಲದೆ ಯುವಕರು ವಾಸ್ತವ ಬದುಕಿನಿಂದ ಬಹುದೂರ ಸರಿಯುತ್ತಿರುವುದು ಸಾಮಾನ್ಯವಾಗಿ ಗೋಚರಿಸುತ್ತಿದೆ.

ಆದ ಕಾರಣ ಸಾರ್ವಜನಿಕರು ಈ ತರಹದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದವರ ಬಗ್ಗೆ ಪೊಲೀಸ್ ಸಹಾಯವಾಣಿ 112 (ERSS) ಗೆ ತಿಳಿಸಲು ಕೋರಿದೆ.

Ramesh Babu

Journalist

Share
Published by
Ramesh Babu

Recent Posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

1 hour ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

2 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

11 hours ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

1 day ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

1 day ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

1 day ago