Categories: ತುಮಕೂರು

ಅಮಲು ಬರಿಸುವ ಸುಮಾರು 56 ಸಾವಿರ ರೂ. ಬೆಲೆಬಾಳುವ 1700 ಮಾತ್ರೆಗಳ ವಶ: ಇಬ್ಬರು ಡ್ರಗ್ಸ್ ದಂಧೆಕೋರರ ಬಂಧನ

ಇತ್ತೀಚೆಗೆ ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಯುವ ಜನರಿಗೆ ವಿದ್ಯಾರ್ಥಿಗಳಿಗೆ ಯಾರೋ ಕೆಲವು ವ್ಯಕ್ತಿಗಳು ಕದ್ದು ಮುಚ್ಚಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುತ್ತಾರೆಂದು ದೂರು ಕೇಳಿಬಂದಿತ್ತು.

ದೂರಿನ ಮಾಹಿತಿ ಮೇರೆಗೆ ಈ ಡ್ರಗ್ಸ್ ದಂಧೆಕೋರರ ಸುಳಿವನ್ನು ಪತ್ತೆ ಮಾಡಿ ಅ.31ರಂದು ಡ್ರಗ್ಸ್ ದಂಧೆಕೋರರ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಸದಾಶಿವನಗರ ಬಡಾವಣೆಯ ರಸ್ತೆಯಲ್ಲಿ ಡ್ರಗ್ಸ್ ಮಾರಾಟದ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಅಬ್ದುಲ್ ಖಾದರ್, ಬೀರೇಶ್ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳ ಬಳಿ ಇದ್ದಂತಹ ಸುಮಾರು 56 ಸಾವಿರ ರೂ. ಬೆಲೆಬಾಳುವ ಅಮಲು ಬರಿಸುವ 1700 ಮಾತ್ರೆಗಳನ್ನು ಮತ್ತು ಒಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.

ಈ ಅಕ್ರಮ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಇತರೆ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಯುವ ಪೀಳಿಗೆ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಡ್ಡದಾರಿ ಹಿಡಿದು ಹಾಳಾಗುತ್ತಿದ್ದು ಹಾಗೂ ಇದರಿಂದ ಸಮಾಜದ ನೆಮ್ಮದಿ ಸ್ವಾಸ್ಥ ಹಾಳಾಗುತ್ತಿರುತ್ತದೆ. ಯುವಕರು ತಮ್ಮಲ್ಲಿರುವ ಅಗಾಧಶಕ್ತಿ, ಸಾಮರ್ಥ್ಯ, ಹೋರಾಟದ ಕೆಚ್ಚು, ಚೈತನ್ಯದ ಅರಿವಿಲ್ಲದೆ ಹಾಗೂ ತಮ್ಮ ಭವಿಷ್ಯದ ಚಿಂತನೆ, ಮುಂದಾಲೋಚನೆ ಮಾಡದೇ ತತ್‌ಕ್ಷಣದ ಸುಖ, ಸಂತೋಷ ಅನುಭವಿಸಲು ಪಾಶ್ಚಿಮಾತ್ಯ ಜೀವನ ಶೈಲಿಯ ಬೆನ್ನತ್ತಿ ಕೆಲ ಅಡ್ಡದಾರಿಗಳನ್ನು ತುಳಿದು ಮಾದಕ ವ್ಯಸನಗಳಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಅಲ್ಲದೆ ಯುವಕರು ವಾಸ್ತವ ಬದುಕಿನಿಂದ ಬಹುದೂರ ಸರಿಯುತ್ತಿರುವುದು ಸಾಮಾನ್ಯವಾಗಿ ಗೋಚರಿಸುತ್ತಿದೆ.

ಆದ ಕಾರಣ ಸಾರ್ವಜನಿಕರು ಈ ತರಹದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದವರ ಬಗ್ಗೆ ಪೊಲೀಸ್ ಸಹಾಯವಾಣಿ 112 (ERSS) ಗೆ ತಿಳಿಸಲು ಕೋರಿದೆ.

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

2 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

14 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

15 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

17 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

19 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

22 hours ago