Categories: ತುಮಕೂರು

ಅಮಲು ಬರಿಸುವ ಸುಮಾರು 56 ಸಾವಿರ ರೂ. ಬೆಲೆಬಾಳುವ 1700 ಮಾತ್ರೆಗಳ ವಶ: ಇಬ್ಬರು ಡ್ರಗ್ಸ್ ದಂಧೆಕೋರರ ಬಂಧನ

ಇತ್ತೀಚೆಗೆ ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಯುವ ಜನರಿಗೆ ವಿದ್ಯಾರ್ಥಿಗಳಿಗೆ ಯಾರೋ ಕೆಲವು ವ್ಯಕ್ತಿಗಳು ಕದ್ದು ಮುಚ್ಚಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುತ್ತಾರೆಂದು ದೂರು ಕೇಳಿಬಂದಿತ್ತು.

ದೂರಿನ ಮಾಹಿತಿ ಮೇರೆಗೆ ಈ ಡ್ರಗ್ಸ್ ದಂಧೆಕೋರರ ಸುಳಿವನ್ನು ಪತ್ತೆ ಮಾಡಿ ಅ.31ರಂದು ಡ್ರಗ್ಸ್ ದಂಧೆಕೋರರ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಸದಾಶಿವನಗರ ಬಡಾವಣೆಯ ರಸ್ತೆಯಲ್ಲಿ ಡ್ರಗ್ಸ್ ಮಾರಾಟದ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಅಬ್ದುಲ್ ಖಾದರ್, ಬೀರೇಶ್ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳ ಬಳಿ ಇದ್ದಂತಹ ಸುಮಾರು 56 ಸಾವಿರ ರೂ. ಬೆಲೆಬಾಳುವ ಅಮಲು ಬರಿಸುವ 1700 ಮಾತ್ರೆಗಳನ್ನು ಮತ್ತು ಒಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.

ಈ ಅಕ್ರಮ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಇತರೆ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಯುವ ಪೀಳಿಗೆ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಡ್ಡದಾರಿ ಹಿಡಿದು ಹಾಳಾಗುತ್ತಿದ್ದು ಹಾಗೂ ಇದರಿಂದ ಸಮಾಜದ ನೆಮ್ಮದಿ ಸ್ವಾಸ್ಥ ಹಾಳಾಗುತ್ತಿರುತ್ತದೆ. ಯುವಕರು ತಮ್ಮಲ್ಲಿರುವ ಅಗಾಧಶಕ್ತಿ, ಸಾಮರ್ಥ್ಯ, ಹೋರಾಟದ ಕೆಚ್ಚು, ಚೈತನ್ಯದ ಅರಿವಿಲ್ಲದೆ ಹಾಗೂ ತಮ್ಮ ಭವಿಷ್ಯದ ಚಿಂತನೆ, ಮುಂದಾಲೋಚನೆ ಮಾಡದೇ ತತ್‌ಕ್ಷಣದ ಸುಖ, ಸಂತೋಷ ಅನುಭವಿಸಲು ಪಾಶ್ಚಿಮಾತ್ಯ ಜೀವನ ಶೈಲಿಯ ಬೆನ್ನತ್ತಿ ಕೆಲ ಅಡ್ಡದಾರಿಗಳನ್ನು ತುಳಿದು ಮಾದಕ ವ್ಯಸನಗಳಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಅಲ್ಲದೆ ಯುವಕರು ವಾಸ್ತವ ಬದುಕಿನಿಂದ ಬಹುದೂರ ಸರಿಯುತ್ತಿರುವುದು ಸಾಮಾನ್ಯವಾಗಿ ಗೋಚರಿಸುತ್ತಿದೆ.

ಆದ ಕಾರಣ ಸಾರ್ವಜನಿಕರು ಈ ತರಹದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದವರ ಬಗ್ಗೆ ಪೊಲೀಸ್ ಸಹಾಯವಾಣಿ 112 (ERSS) ಗೆ ತಿಳಿಸಲು ಕೋರಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

5 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago