ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.
ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.
ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.
ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…