ಅಮಿತ್ ಶಾ ಅಂಗಳಕ್ಕೆ ಎಸ್.ಆರ್.ವಿಶ್ವನಾಥ್ ಮುನಿಸು

ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.

ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.

ಇದರಿಂದ ನಿರಾಶರಾದ ಸುಧಾಕರ್ ವಾಪಸ್ ತೆರಳಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವನಾಥ ಅವರ‌ ಮನವೊಲಿಸಲು ಕರೆ ಮಾಡಿದೆ. ಮೆಸೇಜ್ ಕೂಡ ಕಳುಹಿಸಿದೆ. ಆದರೆ, ಯಾವುದಕ್ಕೂ ಉತ್ತರಿಸಲಿಲ್ಲ.‌ ಹಾಗಾಗಿ‌ ಸಮಾಧಾನಪಡಿಸಲು ಮನೆಯ ಬಳಿ ಬಂದೆ. ವಿಶ್ವನಾಥ್ ಅವರು ಹೊರಗೆ ಹೋಗಿದ್ದಾರೆ‌ ಎಂದು ಭದ್ರತಾ ಸಿಬ್ಬಂದಿ ತಿಳಿಸಿದರು ಎಂದರು.

ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.

ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.

ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.

ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago