ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.
ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.
ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.
ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…