ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.
ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.
ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.
ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…