ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.
ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.
ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.
ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…