ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.
ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.
ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.
ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…