ಅಮಿತ್ ಶಾ ಅಂಗಳಕ್ಕೆ ಎಸ್.ಆರ್.ವಿಶ್ವನಾಥ್ ಮುನಿಸು

ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.

ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.

ಇದರಿಂದ ನಿರಾಶರಾದ ಸುಧಾಕರ್ ವಾಪಸ್ ತೆರಳಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವನಾಥ ಅವರ‌ ಮನವೊಲಿಸಲು ಕರೆ ಮಾಡಿದೆ. ಮೆಸೇಜ್ ಕೂಡ ಕಳುಹಿಸಿದೆ. ಆದರೆ, ಯಾವುದಕ್ಕೂ ಉತ್ತರಿಸಲಿಲ್ಲ.‌ ಹಾಗಾಗಿ‌ ಸಮಾಧಾನಪಡಿಸಲು ಮನೆಯ ಬಳಿ ಬಂದೆ. ವಿಶ್ವನಾಥ್ ಅವರು ಹೊರಗೆ ಹೋಗಿದ್ದಾರೆ‌ ಎಂದು ಭದ್ರತಾ ಸಿಬ್ಬಂದಿ ತಿಳಿಸಿದರು ಎಂದರು.

ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.

ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.

ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.

ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago