ಅಮಿತ್ ಶಾ ಅವರ ಹೇಳಿಕೆ ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡಗಳು, ಒಬಿಸಿ ಇತರೆ ಹಿಂದುಳಿದ ವರ್ಗಗಳಿಗೆ ಘಾಸಿ ಉಂಟುಮಾಡಿದೆ- ಅಮಿತ್ ಶಾರನ್ನ ಸಚಿವ ಸಂಪುಟದಿಂದ ವಜಾ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು-ಹಿರಿಯ ಹೋರಾಟಗಾರ ಸಂಜೀವ್ ನಾಯಕ್ ಆಗ್ರಹ

ದೊಡ್ಡಬಳ್ಳಾಪುರ : ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡಗಳು, ಒಬಿಸಿ ಇತರೆ ಹಿಂದುಳಿದ ವರ್ಗಗಳಿಗೆ ಘಾಸಿ ಉಂಟುಮಾಡಿದೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಹೋರಾಟಗಾರ ಸಂಜೀವ್ ನಾಯಕ್ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಪ್ರತಿಭಟನೆ ನೆಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತದ ಚರಿತ್ರೆಯಲ್ಲಿ ಜಾತಿ ವ್ಯವಸ್ಥೆಯಿಂದ ತುಳಿತಕ್ಕೆ ಒಳಗಾದವರ, ನೊಂದವರ ಹಾಗೂ ಶೋಷಿತರ ಧ್ವನಿಯಾಗಿ ಸರ್ವರು ಸಮಾನರು ಎಂದು ಪ್ರತಿಪಾದಿಸಿದ ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಮೆಚ್ಚುವ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು, ಬಹುಜನ ಹಿತಾಯ ಬಹುಜನ ಸುಖಾಯ ಎಂಬ ಆಶಯದ ಸಂವಿಧಾನವನ್ನು ರಚಿಸಿ ಕೊಟ್ಟವರು. ಬಾಬಾ ಸಾಹೇಬರು ಬರೆದ ಸಂವಿಧಾನದಿಂದ ಈ ದೇಶದ ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಅಕ್ಷರ, ಅಧಿಕಾರ ದೊರೆತು, ಸಮಾಜದಲ್ಲಿ ತಲೆ ಎತ್ತಿ ನಿಲ್ಲವಂತಾಯಿತು. ಆದರೆ, ಈ ಸಂವಿಧಾನವನ್ನು ಹಾಗೂ ಅಂಬೇಡ್ಕರ್ ಅವರನ್ನು ಆರಂಭದಿಂದಲೂ ವಿರೋಧಿಸುತ್ತಾ ಬಂದ ಸಂಘಪರಿವಾರ ಮತ್ತು ಬಿಜೆಪಿ ಪರಿಷ್ಕರಣೆ ಎಂಬ ಹೆಸರಿನಲ್ಲಿ ಸಂವಿಧಾನ ಬದಲಾವಣೆಯ ಮಾತುಗಳನ್ನೂ ಅಡಿತ್ತು ಎಂಬುದನ್ನು ಗಮನಿಸಬೇಕಾದ ವಿಚಾರವಾಗಿದೆ ಎಂದರು.

ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡರಾದ ರಾಮಮೂರ್ತಿ (ರಾಮು ) ನೇರಳೆಘಟ್ಟ ಮಾತನಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಮಾತನಾಡುತ್ತಾ ಅಂಬೇಡ್ಕರ್ ಎಂದು ಹೇಳುವುದು ಇಂದು ಫ್ಯಾಷನ್ ಆಗಿದೆ. “ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದ್ದರೆ ಏಳೇಳೂ ಜನ್ಮಕ್ಕೂ ಸ್ವರ್ಗಕ್ಕೆ ಹೋಗುತ್ತಿದ್ದೀರಿ” ಎಂದು ಹೇಳಿಕೆ ನೀಡುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರನ್ನು ಅವಹೇಳನ ಮಾಡಿದ್ದಾರೆ.ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ಅವರ ವಿರುದ್ಧ ಸೂಕ್ತ ಕಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಶಿವಶಂಕರ್, ಪತ್ರಕರ್ತ ಹಾಗೂ ಹೋರಾಟಗಾರ ರಾಜು ಸಣ್ಣಕ್ಕಿ, ಗುಳ್ಯ ಹನುಮಣ್ಣ, ಮೈಲಾರಪ್ಪ, ಸತೀಶ್, ರತ್ನಮ್ಮ, ನಾಗರತ್ನಮ್ಮ, ರುದ್ರರಾಧ್ಯ, ನಟರಾಜು, ತಳಗವಾರ ಮುನಿಯಪ್ಪ, ಪುನೀತ್, ಅಶೋಕ, ರಾಜಶೇಖರ್, ವಿ.ವೆಂಕಟೇಶ್, ನಾಗಮ್ಮಜ್ಜಿ, ಮಾರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 hour ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

15 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

21 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

2 days ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

2 days ago