Categories: ಕೋಲಾರ

ಅಮಿತ್ ಶಾ ಸಂಪುಟದಿಂದ ವಜಾಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ಸಂಸತ್ತಿನಲ್ಲಿ ಅವಮಾನಿಸಿದ ಗೃಹ ಮಂತ್ರಿ ಅಮಿತ್‌ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ, ಸಿಪಿಐಎಂ, ಹಾಗೂ ದಸಂಸ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ, ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡುವಾಗ ಸಂವಿಧಾನ ಶಿಲ್ಪ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ವ್ಯಸನಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ. ಇದು ಅವರ ದುರಹಂಕಾರ ಮತ್ತು ಅಂಬೇಡ್ಕರ್ ರವರ ಬಗ್ಗೆ ಸಂಘ ಪರಿವಾರ ಹೊಂದಿರುವ ನಿಜ ಸ್ಥಿತಿಯನ್ನು ಬಯಲು ಮಾಡಿದೆ ಕಳೆದ ಲೋಕಸಭಾ ಚುನಾವಣೆಗಳು ಉತ್ತರ ಕೊಟ್ಟಿವೆ ಆದರೂ ಬಿಜೆಪಿ ಮತ್ತು ಸಂಘ ಪರಿವಾರದ ದುರಹಂಕಾರ ಕಮ್ಮಿ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ದಸಂಸ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ಮಾತನಾಡಿ ಚುನಾವಣಾ ಸಮಯದಲ್ಲಿ ಅಂಬೇಡ್ಕರ್ ಕುರಿತು ದೊಡ್ಡ ಮಟ್ಟದಲ್ಲಿ ಜಪಿಸಿ ದಲಿತರ ಮತ ಪಡೆಯಲು ಯತ್ನಿಸಿತ್ತು. ಇದೀಗ ಕೇಂದ್ರ ಸಚಿವ ಅಂಬೇಡ್ಕ‌ರ್ ರವರ ಕುರಿತು ತಮ್ಮ ಮನದಾಳದಲ್ಲಿನ ಸಂಘ ಪರಿವಾರದ ಸಂಸ್ಕೃತಿಯನ್ನು ಪ್ರತಿಪಾದಿಸಿದೆ. ಅಮಿತ್ ಷಾರವರ ಮಾತುಗಳು ದೇಶದಾದ್ಯಂತ ಜನರ ಭಾವನೆಗಳನ್ನು ಕೆರಳಿಸಿದೆ ಆರಂಭದಿಂದಲೂ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವನ್ನೇ ಒಪ್ಪದ ಆರ್.ಎಸ್.ಎಸ್.. ಮನುಸ್ಮೃತಿಯನ್ನೇ ಈ ದೇಶದಲ್ಲಿ ಜಾರಿ ಮಾಡಲು ಅಂತರ್ಗತ ಕಾರ್ಯ ಸೂಚಿಯನ್ನು ಹೊಂದಿದೆ. ಅಂಬೇಡ್ಕರ್‌ರವರು ಪ್ರತಿಪಾದಿಸಿದ ವಿಚಾರಗಳು ದಲಿತ, ದಮನಿತ ಶೋಷಿತ ವರ್ಗಗಳು, ಆದಿವಾಸಿಗಳು, ಹಿಂದುಳಿದ ವರ್ಗಗಳಿಗೆ ಬೆಳಕಾಗಿದೆ. ಇಂತಹವರನ್ನು ಅವಮಾನಿಸಿದ ಅಮಿತ್ ಷಾರವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ ಮಾತನಾಡಿ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರನ್ನು ಕುರಿತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿರವರು ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಂಡನೀಯ ಬುದ್ದಿ ಜೀವಿಗಳ ಸದನ ಎಂದು ಕರೆಯುವ ವಿಧಾನಪರಿಷತ್‌ನಲ್ಲಿ ಈ ಘಟನೆ ನಡೆದಿರುವುದು ದುರದೃಷ್ಟಕರ. ಕೂಡಲೇ ಸಿ.ಟಿ.ರವಿರವರ ವಿಧಾನಪರಿಷತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕು ಸಚಿವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರೂ ಘನ ನ್ಯಾಯಾಲಯ ನೀಡಿರುವ ಜಾಮೀನು ವಿರುದ್ಧ ಮೇಲ್ಮನವಿ ಸಲ್ಲಿಸಬೇಕು. ಸಿ.ಟಿ. ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರಾದ ನಗರಸಭೆ ಮಾಜಿ ಅಧ್ಯಕ್ಷ ಅಫ್ರೋಜ್ ಪಾಷ, ವಿ.ಗೀತಾ, ಎಂ.ವಿಜಯಕೃಷ್ಣ, ಬೀರಮಾನಹಳ್ಳಿ ಅಂಜಿನಪ್ಪ, ಭೀಮರಾಜ್, ವಿ.ನಾರಾಯಣರೆಡ್ಡಿ, ಸೀಪುರ ದೇವರಾಜ್, ಆಶಾ, ಕೆ.ವಿ.ಮಂಜುನಾಥ್, ಸುಶೀಲ, ಯಲ್ಲಪ್ಪ, ಕುಚೇಲಪ್ಪ, ದಿಂಬಚಾಮನಹಳ್ಳಿ ಮುನಿಯಪ್ಪ, ರಾಜೇಂದ್ರ, ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

12 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

16 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

16 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

21 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago