Categories: ಕೋಲಾರ

ಅಮಿತ್ ಶಾ ಸಂಪುಟದಿಂದ ವಜಾಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ಸಂಸತ್ತಿನಲ್ಲಿ ಅವಮಾನಿಸಿದ ಗೃಹ ಮಂತ್ರಿ ಅಮಿತ್‌ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ, ಸಿಪಿಐಎಂ, ಹಾಗೂ ದಸಂಸ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ, ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡುವಾಗ ಸಂವಿಧಾನ ಶಿಲ್ಪ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ವ್ಯಸನಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ. ಇದು ಅವರ ದುರಹಂಕಾರ ಮತ್ತು ಅಂಬೇಡ್ಕರ್ ರವರ ಬಗ್ಗೆ ಸಂಘ ಪರಿವಾರ ಹೊಂದಿರುವ ನಿಜ ಸ್ಥಿತಿಯನ್ನು ಬಯಲು ಮಾಡಿದೆ ಕಳೆದ ಲೋಕಸಭಾ ಚುನಾವಣೆಗಳು ಉತ್ತರ ಕೊಟ್ಟಿವೆ ಆದರೂ ಬಿಜೆಪಿ ಮತ್ತು ಸಂಘ ಪರಿವಾರದ ದುರಹಂಕಾರ ಕಮ್ಮಿ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ದಸಂಸ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ಮಾತನಾಡಿ ಚುನಾವಣಾ ಸಮಯದಲ್ಲಿ ಅಂಬೇಡ್ಕರ್ ಕುರಿತು ದೊಡ್ಡ ಮಟ್ಟದಲ್ಲಿ ಜಪಿಸಿ ದಲಿತರ ಮತ ಪಡೆಯಲು ಯತ್ನಿಸಿತ್ತು. ಇದೀಗ ಕೇಂದ್ರ ಸಚಿವ ಅಂಬೇಡ್ಕ‌ರ್ ರವರ ಕುರಿತು ತಮ್ಮ ಮನದಾಳದಲ್ಲಿನ ಸಂಘ ಪರಿವಾರದ ಸಂಸ್ಕೃತಿಯನ್ನು ಪ್ರತಿಪಾದಿಸಿದೆ. ಅಮಿತ್ ಷಾರವರ ಮಾತುಗಳು ದೇಶದಾದ್ಯಂತ ಜನರ ಭಾವನೆಗಳನ್ನು ಕೆರಳಿಸಿದೆ ಆರಂಭದಿಂದಲೂ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವನ್ನೇ ಒಪ್ಪದ ಆರ್.ಎಸ್.ಎಸ್.. ಮನುಸ್ಮೃತಿಯನ್ನೇ ಈ ದೇಶದಲ್ಲಿ ಜಾರಿ ಮಾಡಲು ಅಂತರ್ಗತ ಕಾರ್ಯ ಸೂಚಿಯನ್ನು ಹೊಂದಿದೆ. ಅಂಬೇಡ್ಕರ್‌ರವರು ಪ್ರತಿಪಾದಿಸಿದ ವಿಚಾರಗಳು ದಲಿತ, ದಮನಿತ ಶೋಷಿತ ವರ್ಗಗಳು, ಆದಿವಾಸಿಗಳು, ಹಿಂದುಳಿದ ವರ್ಗಗಳಿಗೆ ಬೆಳಕಾಗಿದೆ. ಇಂತಹವರನ್ನು ಅವಮಾನಿಸಿದ ಅಮಿತ್ ಷಾರವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ ಮಾತನಾಡಿ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರನ್ನು ಕುರಿತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿರವರು ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಂಡನೀಯ ಬುದ್ದಿ ಜೀವಿಗಳ ಸದನ ಎಂದು ಕರೆಯುವ ವಿಧಾನಪರಿಷತ್‌ನಲ್ಲಿ ಈ ಘಟನೆ ನಡೆದಿರುವುದು ದುರದೃಷ್ಟಕರ. ಕೂಡಲೇ ಸಿ.ಟಿ.ರವಿರವರ ವಿಧಾನಪರಿಷತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕು ಸಚಿವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರೂ ಘನ ನ್ಯಾಯಾಲಯ ನೀಡಿರುವ ಜಾಮೀನು ವಿರುದ್ಧ ಮೇಲ್ಮನವಿ ಸಲ್ಲಿಸಬೇಕು. ಸಿ.ಟಿ. ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರಾದ ನಗರಸಭೆ ಮಾಜಿ ಅಧ್ಯಕ್ಷ ಅಫ್ರೋಜ್ ಪಾಷ, ವಿ.ಗೀತಾ, ಎಂ.ವಿಜಯಕೃಷ್ಣ, ಬೀರಮಾನಹಳ್ಳಿ ಅಂಜಿನಪ್ಪ, ಭೀಮರಾಜ್, ವಿ.ನಾರಾಯಣರೆಡ್ಡಿ, ಸೀಪುರ ದೇವರಾಜ್, ಆಶಾ, ಕೆ.ವಿ.ಮಂಜುನಾಥ್, ಸುಶೀಲ, ಯಲ್ಲಪ್ಪ, ಕುಚೇಲಪ್ಪ, ದಿಂಬಚಾಮನಹಳ್ಳಿ ಮುನಿಯಪ್ಪ, ರಾಜೇಂದ್ರ, ಮುಂತಾದವರು ಇದ್ದರು.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

11 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

11 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

17 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

1 day ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

2 days ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago