Categories: ಕೋಲಾರ

ಅಮಿತ್ ಶಾ ಸಂಪುಟದಿಂದ ವಜಾಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ಸಂಸತ್ತಿನಲ್ಲಿ ಅವಮಾನಿಸಿದ ಗೃಹ ಮಂತ್ರಿ ಅಮಿತ್‌ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ, ಸಿಪಿಐಎಂ, ಹಾಗೂ ದಸಂಸ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ, ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡುವಾಗ ಸಂವಿಧಾನ ಶಿಲ್ಪ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ವ್ಯಸನಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ. ಇದು ಅವರ ದುರಹಂಕಾರ ಮತ್ತು ಅಂಬೇಡ್ಕರ್ ರವರ ಬಗ್ಗೆ ಸಂಘ ಪರಿವಾರ ಹೊಂದಿರುವ ನಿಜ ಸ್ಥಿತಿಯನ್ನು ಬಯಲು ಮಾಡಿದೆ ಕಳೆದ ಲೋಕಸಭಾ ಚುನಾವಣೆಗಳು ಉತ್ತರ ಕೊಟ್ಟಿವೆ ಆದರೂ ಬಿಜೆಪಿ ಮತ್ತು ಸಂಘ ಪರಿವಾರದ ದುರಹಂಕಾರ ಕಮ್ಮಿ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಪ್ರತಿಭಟನೆಯನ್ನು ಉದ್ದೇಶಿಸಿ ದಸಂಸ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ಮಾತನಾಡಿ ಚುನಾವಣಾ ಸಮಯದಲ್ಲಿ ಅಂಬೇಡ್ಕರ್ ಕುರಿತು ದೊಡ್ಡ ಮಟ್ಟದಲ್ಲಿ ಜಪಿಸಿ ದಲಿತರ ಮತ ಪಡೆಯಲು ಯತ್ನಿಸಿತ್ತು. ಇದೀಗ ಕೇಂದ್ರ ಸಚಿವ ಅಂಬೇಡ್ಕ‌ರ್ ರವರ ಕುರಿತು ತಮ್ಮ ಮನದಾಳದಲ್ಲಿನ ಸಂಘ ಪರಿವಾರದ ಸಂಸ್ಕೃತಿಯನ್ನು ಪ್ರತಿಪಾದಿಸಿದೆ. ಅಮಿತ್ ಷಾರವರ ಮಾತುಗಳು ದೇಶದಾದ್ಯಂತ ಜನರ ಭಾವನೆಗಳನ್ನು ಕೆರಳಿಸಿದೆ ಆರಂಭದಿಂದಲೂ ಅಂಬೇಡ್ಕರ್ ರವರು ರಚಿಸಿದ ಸಂವಿಧಾನವನ್ನೇ ಒಪ್ಪದ ಆರ್.ಎಸ್.ಎಸ್.. ಮನುಸ್ಮೃತಿಯನ್ನೇ ಈ ದೇಶದಲ್ಲಿ ಜಾರಿ ಮಾಡಲು ಅಂತರ್ಗತ ಕಾರ್ಯ ಸೂಚಿಯನ್ನು ಹೊಂದಿದೆ. ಅಂಬೇಡ್ಕರ್‌ರವರು ಪ್ರತಿಪಾದಿಸಿದ ವಿಚಾರಗಳು ದಲಿತ, ದಮನಿತ ಶೋಷಿತ ವರ್ಗಗಳು, ಆದಿವಾಸಿಗಳು, ಹಿಂದುಳಿದ ವರ್ಗಗಳಿಗೆ ಬೆಳಕಾಗಿದೆ. ಇಂತಹವರನ್ನು ಅವಮಾನಿಸಿದ ಅಮಿತ್ ಷಾರವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ ಮಾತನಾಡಿ, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರನ್ನು ಕುರಿತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿರವರು ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಂಡನೀಯ ಬುದ್ದಿ ಜೀವಿಗಳ ಸದನ ಎಂದು ಕರೆಯುವ ವಿಧಾನಪರಿಷತ್‌ನಲ್ಲಿ ಈ ಘಟನೆ ನಡೆದಿರುವುದು ದುರದೃಷ್ಟಕರ. ಕೂಡಲೇ ಸಿ.ಟಿ.ರವಿರವರ ವಿಧಾನಪರಿಷತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕು ಸಚಿವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರೂ ಘನ ನ್ಯಾಯಾಲಯ ನೀಡಿರುವ ಜಾಮೀನು ವಿರುದ್ಧ ಮೇಲ್ಮನವಿ ಸಲ್ಲಿಸಬೇಕು. ಸಿ.ಟಿ. ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರಾದ ನಗರಸಭೆ ಮಾಜಿ ಅಧ್ಯಕ್ಷ ಅಫ್ರೋಜ್ ಪಾಷ, ವಿ.ಗೀತಾ, ಎಂ.ವಿಜಯಕೃಷ್ಣ, ಬೀರಮಾನಹಳ್ಳಿ ಅಂಜಿನಪ್ಪ, ಭೀಮರಾಜ್, ವಿ.ನಾರಾಯಣರೆಡ್ಡಿ, ಸೀಪುರ ದೇವರಾಜ್, ಆಶಾ, ಕೆ.ವಿ.ಮಂಜುನಾಥ್, ಸುಶೀಲ, ಯಲ್ಲಪ್ಪ, ಕುಚೇಲಪ್ಪ, ದಿಂಬಚಾಮನಹಳ್ಳಿ ಮುನಿಯಪ್ಪ, ರಾಜೇಂದ್ರ, ಮುಂತಾದವರು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago