Categories: ಕೋಲಾರ

ಅಮಿತ್‌ ಶಾ, ಸಿ.ಟಿ.ರವಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

ಕೋಲಾರ: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಉಚ್ಚಾಟಿಸಬೇಕು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಪರಿಷತ್‌ ಸ್ಥಾನದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಘಟಕದಿಂದ ಶನಿವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪಕ್ಷ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ಸಂಘಪರಿವಾರದವರಿಗೆ ಹಾಗೂ ಬಿಜೆಪಿ ಪಕ್ಷಕ್ಕೆ ಅಂಬೇಡ್ಕರ್‌ ಅವರ ಹೆಸರು ನುಂಗಲಾರದ ತುತ್ತಾಗಿದೆ ಬಿಜೆಪಿಯವರಿಗೆ ಅಧಿಕಾರಕ್ಕೇರಲು ಮಾತ್ರ ಸಂವಿಧಾನ ಬೇಕು ಆದರೆ ಅವರ ಆಶಯಗಳನ್ನು ವಿರೋಧಿಸಿಕೊಂಡು ಬಂದಿದ್ದಾರೆ ಬಿಜೆಪಿ ಪಕ್ಷದ ನಾಯಕರಲ್ಲಿ ಅಂಬೇಡ್ಕರ್‌ ಬಗ್ಗೆ ಮೊದಲಿಂದಲೂ ತಿರಸ್ಕಾರದ ಭಾವನೆ ಇದೆ ಎಂದೂ ಆರೋಪಿಸಿದರು.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸಿಕೊಂಡು ಬಂದಿರುವ ಬಿಜೆಪಿ ಪಕ್ಷವು ನಿರಂತರವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ ಅಂಬೇಡ್ಕರ್ ಅಂತಹ ಮಹಾನ್ ಚೇತನ ದೇಶಕ್ಕೆ ಸಂವಿಧಾನ ಕೊಟ್ಟು ಅದರಿಂದಲೇ ಮತದಾನದಿಂದ ಅಧಿಕಾರವನ್ನು ಕೊಟ್ಟಿದ್ದಾರೆ ಎಂಬುದನ್ನು ಮರೆತಿದ್ದಾರೆ ಅಂಬೇಡ್ಕರ್ ಒಬ್ಬ ವ್ಯಕ್ತಿಯಲ್ಲ ಅವರೊಬ್ಬರು ದೇಶದ ಶಕ್ತಿಯಾಗಿದ್ದು ಜನ ಕಾಯತ್ತಾರೆ ಇದ್ದಾರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ತಿಳಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ವಿವಿಧ ಘಟಕಗಳ ಅಧ್ಯಕ್ಷರಾದ ಎಸ್ಸಿ ಘಟಕದ ಕೆ.ಜಯದೇವ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಎಸ್ಟಿ ಘಟಕದ ನಾಗರಾಜ್, ಪದವೀಧರ ಘಟಕದ ಸುಧೀರ್, ಮೀನುಗಾರಿಕೆ ಘಟಕದ ರಂಗನಾಥ್, ಮಹಿಳಾ ಘಟಕದ ರತ್ನಮ್ಮ, ಬೀದಿಬದಿ ವ್ಯಾಪಾರಸ್ಥ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ರಾಮಯ್ಯ, ನಾಗರಾಜಗೌಡ, ಸಂಜೀವಪ್ಪ, ಹರೀಶ್ ಮುಂತಾದವರು ವಹಿಸಿದ್ದರು.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

57 minutes ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

1 hour ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

16 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

21 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

21 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago