Categories: ಕೋಲಾರ

ಅಮಿತ್‌ ಶಾ, ಸಿ.ಟಿ.ರವಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

ಕೋಲಾರ: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಉಚ್ಚಾಟಿಸಬೇಕು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಪರಿಷತ್‌ ಸ್ಥಾನದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಘಟಕದಿಂದ ಶನಿವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪಕ್ಷ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ಸಂಘಪರಿವಾರದವರಿಗೆ ಹಾಗೂ ಬಿಜೆಪಿ ಪಕ್ಷಕ್ಕೆ ಅಂಬೇಡ್ಕರ್‌ ಅವರ ಹೆಸರು ನುಂಗಲಾರದ ತುತ್ತಾಗಿದೆ ಬಿಜೆಪಿಯವರಿಗೆ ಅಧಿಕಾರಕ್ಕೇರಲು ಮಾತ್ರ ಸಂವಿಧಾನ ಬೇಕು ಆದರೆ ಅವರ ಆಶಯಗಳನ್ನು ವಿರೋಧಿಸಿಕೊಂಡು ಬಂದಿದ್ದಾರೆ ಬಿಜೆಪಿ ಪಕ್ಷದ ನಾಯಕರಲ್ಲಿ ಅಂಬೇಡ್ಕರ್‌ ಬಗ್ಗೆ ಮೊದಲಿಂದಲೂ ತಿರಸ್ಕಾರದ ಭಾವನೆ ಇದೆ ಎಂದೂ ಆರೋಪಿಸಿದರು.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸಿಕೊಂಡು ಬಂದಿರುವ ಬಿಜೆಪಿ ಪಕ್ಷವು ನಿರಂತರವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ ಅಂಬೇಡ್ಕರ್ ಅಂತಹ ಮಹಾನ್ ಚೇತನ ದೇಶಕ್ಕೆ ಸಂವಿಧಾನ ಕೊಟ್ಟು ಅದರಿಂದಲೇ ಮತದಾನದಿಂದ ಅಧಿಕಾರವನ್ನು ಕೊಟ್ಟಿದ್ದಾರೆ ಎಂಬುದನ್ನು ಮರೆತಿದ್ದಾರೆ ಅಂಬೇಡ್ಕರ್ ಒಬ್ಬ ವ್ಯಕ್ತಿಯಲ್ಲ ಅವರೊಬ್ಬರು ದೇಶದ ಶಕ್ತಿಯಾಗಿದ್ದು ಜನ ಕಾಯತ್ತಾರೆ ಇದ್ದಾರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ತಿಳಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ವಿವಿಧ ಘಟಕಗಳ ಅಧ್ಯಕ್ಷರಾದ ಎಸ್ಸಿ ಘಟಕದ ಕೆ.ಜಯದೇವ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಎಸ್ಟಿ ಘಟಕದ ನಾಗರಾಜ್, ಪದವೀಧರ ಘಟಕದ ಸುಧೀರ್, ಮೀನುಗಾರಿಕೆ ಘಟಕದ ರಂಗನಾಥ್, ಮಹಿಳಾ ಘಟಕದ ರತ್ನಮ್ಮ, ಬೀದಿಬದಿ ವ್ಯಾಪಾರಸ್ಥ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ರಾಮಯ್ಯ, ನಾಗರಾಜಗೌಡ, ಸಂಜೀವಪ್ಪ, ಹರೀಶ್ ಮುಂತಾದವರು ವಹಿಸಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago