Categories: ಕೋಲಾರ

‘ಅಮಿತ್ ಶಾ ಹಾಗೂ ಸಿ.ಟಿ ರವಿ ಜನಪ್ರತಿನಿಧಿಯಾಗಿರಲು ಯೋಗ್ಯತೆಯಿಲ್ಲ’- ಮೈಲಾಂಡಹಳ್ಳಿ ಮುರಳಿ

ಕೋಲಾರ: ಸಂವಿಧಾನ ರಚನೆಕಾರ ಅಂಬೇಡ್ಕ‌ರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಹಾಗೂ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಸಂಘಪರಿವಾರದವರು ಪದೇ ಪದೇ ತಮ್ಮ ಅನಾಗರಿಕ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆ, ದೇಶದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಬಹುಮುಖ್ಯವಾಗಿದೆ ಅಂತಹ ಪಕ್ಷದ ಹಿರಿಯ ಮುಖಂಡರಿಗೆ ಒಂದಲ್ಲ ಒಂದು ರೀತಿಯಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸುತ್ತಾ ಬಂದಿರುವ ಅವರು ತಮ್ಮ ಹರುಕು ಬಾಯಿಯನ್ನು ಮತ್ತೆ ಅವಾಚ್ಯಕ ಶಬ್ದಗಳಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಳಸಿರುವುದು ಇಡಿ ಸ್ತ್ರೀ ಕುಲಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಎಂಎಲ್ಸಿ ಸಿ.ಟಿ ರವಿ ಅವರನ್ನು ಕಾನೂನು ಪ್ರಕಾರ ಬಂಧಿಸಿ ಬಿಡುಗಡೆ ಮಾಡಿದ್ದು ಸರಿಯಿದ್ದು ಬಿಜೆಪಿ ಕುಟುಂಬದ ಹೆಣ್ಣು ಮಕ್ಕಳಿಗೆ ಏನಾದರೂ ಈ ರೀತಿಯಲ್ಲಿ ಅವಮಾನ ಮಾಡಿದ್ದರೆ ಸುಮ್ಮನೆ ಇರತ್ತಾ ಇದ್ದರಾ ಕಾನೂನು ಎಲ್ಲರಿಗೂ ಒಂದೇ ಇದ್ದು ವಿನಾಕಾರಣ ಬಿಜೆಪಿ ಸರಕಾರದ ವಿರುದ್ದ ಆರೋಪಿಸಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಬಗ್ಗೆ ಮತ್ತು ಸಿ.ಟಿ.ರವಿ ಅವರು ಮಹಿಳೆಯ ಬಗ್ಗೆ ಹೇಳಿರುವುದು ಎಷ್ಟು ಸರಿ, ಹಾಗೆ ಹೆಣ್ಣು ಮಕ್ಕಳಿಗೆ ಸ್ವತಂತ್ರಯನ್ನು ಕೊಟ್ಟಂತವರ ಬಗ್ಗೆ ಅವಹೇಳನಕಾರಿ ಮಾತುಗಳನಾಡಿದ್ದು ಕೂಡ ಇಡೀ ಕಾಂಗ್ರೆಸ್ ಪಕ್ಷವು ವಿರೋಧಿಸುತ್ತದೆ ಕೂಡಲೇ ಅಮಿತಾ ಶಾ ಮತ್ತು ಸಿ.ಟಿ.ರವಿ ಅವರನ್ನು ಜನಪ್ರತಿನಿಧಿಯಾಗಿ ರಾಜೀನಾಮೆ ಕೊಡಿಸಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೈಲಾಂಡಹಳ್ಳಿ ಮುರಳಿ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

3 minutes ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

15 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

19 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

19 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago