Categories: ಕೋಲಾರ

‘ಅಮಿತ್ ಶಾ ಹಾಗೂ ಸಿ.ಟಿ ರವಿ ಜನಪ್ರತಿನಿಧಿಯಾಗಿರಲು ಯೋಗ್ಯತೆಯಿಲ್ಲ’- ಮೈಲಾಂಡಹಳ್ಳಿ ಮುರಳಿ

ಕೋಲಾರ: ಸಂವಿಧಾನ ರಚನೆಕಾರ ಅಂಬೇಡ್ಕ‌ರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಹಾಗೂ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಸಂಘಪರಿವಾರದವರು ಪದೇ ಪದೇ ತಮ್ಮ ಅನಾಗರಿಕ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆ, ದೇಶದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಬಹುಮುಖ್ಯವಾಗಿದೆ ಅಂತಹ ಪಕ್ಷದ ಹಿರಿಯ ಮುಖಂಡರಿಗೆ ಒಂದಲ್ಲ ಒಂದು ರೀತಿಯಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸುತ್ತಾ ಬಂದಿರುವ ಅವರು ತಮ್ಮ ಹರುಕು ಬಾಯಿಯನ್ನು ಮತ್ತೆ ಅವಾಚ್ಯಕ ಶಬ್ದಗಳಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಳಸಿರುವುದು ಇಡಿ ಸ್ತ್ರೀ ಕುಲಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಎಂಎಲ್ಸಿ ಸಿ.ಟಿ ರವಿ ಅವರನ್ನು ಕಾನೂನು ಪ್ರಕಾರ ಬಂಧಿಸಿ ಬಿಡುಗಡೆ ಮಾಡಿದ್ದು ಸರಿಯಿದ್ದು ಬಿಜೆಪಿ ಕುಟುಂಬದ ಹೆಣ್ಣು ಮಕ್ಕಳಿಗೆ ಏನಾದರೂ ಈ ರೀತಿಯಲ್ಲಿ ಅವಮಾನ ಮಾಡಿದ್ದರೆ ಸುಮ್ಮನೆ ಇರತ್ತಾ ಇದ್ದರಾ ಕಾನೂನು ಎಲ್ಲರಿಗೂ ಒಂದೇ ಇದ್ದು ವಿನಾಕಾರಣ ಬಿಜೆಪಿ ಸರಕಾರದ ವಿರುದ್ದ ಆರೋಪಿಸಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಬಗ್ಗೆ ಮತ್ತು ಸಿ.ಟಿ.ರವಿ ಅವರು ಮಹಿಳೆಯ ಬಗ್ಗೆ ಹೇಳಿರುವುದು ಎಷ್ಟು ಸರಿ, ಹಾಗೆ ಹೆಣ್ಣು ಮಕ್ಕಳಿಗೆ ಸ್ವತಂತ್ರಯನ್ನು ಕೊಟ್ಟಂತವರ ಬಗ್ಗೆ ಅವಹೇಳನಕಾರಿ ಮಾತುಗಳನಾಡಿದ್ದು ಕೂಡ ಇಡೀ ಕಾಂಗ್ರೆಸ್ ಪಕ್ಷವು ವಿರೋಧಿಸುತ್ತದೆ ಕೂಡಲೇ ಅಮಿತಾ ಶಾ ಮತ್ತು ಸಿ.ಟಿ.ರವಿ ಅವರನ್ನು ಜನಪ್ರತಿನಿಧಿಯಾಗಿ ರಾಜೀನಾಮೆ ಕೊಡಿಸಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೈಲಾಂಡಹಳ್ಳಿ ಮುರಳಿ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

53 minutes ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

2 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

5 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

22 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

24 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

24 hours ago