Categories: ಕೋಲಾರ

‘ಅಮಿತ್ ಶಾ ಹಾಗೂ ಸಿ.ಟಿ ರವಿ ಜನಪ್ರತಿನಿಧಿಯಾಗಿರಲು ಯೋಗ್ಯತೆಯಿಲ್ಲ’- ಮೈಲಾಂಡಹಳ್ಳಿ ಮುರಳಿ

ಕೋಲಾರ: ಸಂವಿಧಾನ ರಚನೆಕಾರ ಅಂಬೇಡ್ಕ‌ರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಹಾಗೂ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಸಂಘಪರಿವಾರದವರು ಪದೇ ಪದೇ ತಮ್ಮ ಅನಾಗರಿಕ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆ, ದೇಶದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಬಹುಮುಖ್ಯವಾಗಿದೆ ಅಂತಹ ಪಕ್ಷದ ಹಿರಿಯ ಮುಖಂಡರಿಗೆ ಒಂದಲ್ಲ ಒಂದು ರೀತಿಯಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸುತ್ತಾ ಬಂದಿರುವ ಅವರು ತಮ್ಮ ಹರುಕು ಬಾಯಿಯನ್ನು ಮತ್ತೆ ಅವಾಚ್ಯಕ ಶಬ್ದಗಳಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಳಸಿರುವುದು ಇಡಿ ಸ್ತ್ರೀ ಕುಲಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಎಂಎಲ್ಸಿ ಸಿ.ಟಿ ರವಿ ಅವರನ್ನು ಕಾನೂನು ಪ್ರಕಾರ ಬಂಧಿಸಿ ಬಿಡುಗಡೆ ಮಾಡಿದ್ದು ಸರಿಯಿದ್ದು ಬಿಜೆಪಿ ಕುಟುಂಬದ ಹೆಣ್ಣು ಮಕ್ಕಳಿಗೆ ಏನಾದರೂ ಈ ರೀತಿಯಲ್ಲಿ ಅವಮಾನ ಮಾಡಿದ್ದರೆ ಸುಮ್ಮನೆ ಇರತ್ತಾ ಇದ್ದರಾ ಕಾನೂನು ಎಲ್ಲರಿಗೂ ಒಂದೇ ಇದ್ದು ವಿನಾಕಾರಣ ಬಿಜೆಪಿ ಸರಕಾರದ ವಿರುದ್ದ ಆರೋಪಿಸಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಬಗ್ಗೆ ಮತ್ತು ಸಿ.ಟಿ.ರವಿ ಅವರು ಮಹಿಳೆಯ ಬಗ್ಗೆ ಹೇಳಿರುವುದು ಎಷ್ಟು ಸರಿ, ಹಾಗೆ ಹೆಣ್ಣು ಮಕ್ಕಳಿಗೆ ಸ್ವತಂತ್ರಯನ್ನು ಕೊಟ್ಟಂತವರ ಬಗ್ಗೆ ಅವಹೇಳನಕಾರಿ ಮಾತುಗಳನಾಡಿದ್ದು ಕೂಡ ಇಡೀ ಕಾಂಗ್ರೆಸ್ ಪಕ್ಷವು ವಿರೋಧಿಸುತ್ತದೆ ಕೂಡಲೇ ಅಮಿತಾ ಶಾ ಮತ್ತು ಸಿ.ಟಿ.ರವಿ ಅವರನ್ನು ಜನಪ್ರತಿನಿಧಿಯಾಗಿ ರಾಜೀನಾಮೆ ಕೊಡಿಸಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೈಲಾಂಡಹಳ್ಳಿ ಮುರಳಿ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

11 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

11 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

17 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

1 day ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

2 days ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago