Categories: ಕೋಲಾರ

‘ಅಮಿತ್ ಶಾ ಹಾಗೂ ಸಿ.ಟಿ ರವಿ ಜನಪ್ರತಿನಿಧಿಯಾಗಿರಲು ಯೋಗ್ಯತೆಯಿಲ್ಲ’- ಮೈಲಾಂಡಹಳ್ಳಿ ಮುರಳಿ

ಕೋಲಾರ: ಸಂವಿಧಾನ ರಚನೆಕಾರ ಅಂಬೇಡ್ಕ‌ರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಹಾಗೂ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಸಂಘಪರಿವಾರದವರು ಪದೇ ಪದೇ ತಮ್ಮ ಅನಾಗರಿಕ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆ, ದೇಶದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಬಹುಮುಖ್ಯವಾಗಿದೆ ಅಂತಹ ಪಕ್ಷದ ಹಿರಿಯ ಮುಖಂಡರಿಗೆ ಒಂದಲ್ಲ ಒಂದು ರೀತಿಯಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸುತ್ತಾ ಬಂದಿರುವ ಅವರು ತಮ್ಮ ಹರುಕು ಬಾಯಿಯನ್ನು ಮತ್ತೆ ಅವಾಚ್ಯಕ ಶಬ್ದಗಳಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಳಸಿರುವುದು ಇಡಿ ಸ್ತ್ರೀ ಕುಲಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಎಂಎಲ್ಸಿ ಸಿ.ಟಿ ರವಿ ಅವರನ್ನು ಕಾನೂನು ಪ್ರಕಾರ ಬಂಧಿಸಿ ಬಿಡುಗಡೆ ಮಾಡಿದ್ದು ಸರಿಯಿದ್ದು ಬಿಜೆಪಿ ಕುಟುಂಬದ ಹೆಣ್ಣು ಮಕ್ಕಳಿಗೆ ಏನಾದರೂ ಈ ರೀತಿಯಲ್ಲಿ ಅವಮಾನ ಮಾಡಿದ್ದರೆ ಸುಮ್ಮನೆ ಇರತ್ತಾ ಇದ್ದರಾ ಕಾನೂನು ಎಲ್ಲರಿಗೂ ಒಂದೇ ಇದ್ದು ವಿನಾಕಾರಣ ಬಿಜೆಪಿ ಸರಕಾರದ ವಿರುದ್ದ ಆರೋಪಿಸಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಬಗ್ಗೆ ಮತ್ತು ಸಿ.ಟಿ.ರವಿ ಅವರು ಮಹಿಳೆಯ ಬಗ್ಗೆ ಹೇಳಿರುವುದು ಎಷ್ಟು ಸರಿ, ಹಾಗೆ ಹೆಣ್ಣು ಮಕ್ಕಳಿಗೆ ಸ್ವತಂತ್ರಯನ್ನು ಕೊಟ್ಟಂತವರ ಬಗ್ಗೆ ಅವಹೇಳನಕಾರಿ ಮಾತುಗಳನಾಡಿದ್ದು ಕೂಡ ಇಡೀ ಕಾಂಗ್ರೆಸ್ ಪಕ್ಷವು ವಿರೋಧಿಸುತ್ತದೆ ಕೂಡಲೇ ಅಮಿತಾ ಶಾ ಮತ್ತು ಸಿ.ಟಿ.ರವಿ ಅವರನ್ನು ಜನಪ್ರತಿನಿಧಿಯಾಗಿ ರಾಜೀನಾಮೆ ಕೊಡಿಸಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೈಲಾಂಡಹಳ್ಳಿ ಮುರಳಿ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

38 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago