ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ರ ಯೋಜನೆಯಡಿಯಲ್ಲಿ ಸ್ಥಗಿತವಾಗಿರುವ ವಿವಿಧ ಕಾಮಗಾರಿಗಳು: ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಕಚೇರಿ ಎದರು ಕಪ್ಪು ಪಟ್ಟಿ ಧರಿಸಿ ಶಾಸಕ ಪ್ರತಿಭಟನೆ

ದೊಡ್ಡಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿನ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ರ ಯೋಜನೆಯಡಿಯಲ್ಲಿ ಸ್ಥಗಿತವಾಗಿರುವ ವಿವಿಧ ಕಾಮಗಾರಿಗಳನ್ನು ಶೀರ್ಘವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರಸಭೆ ಸದಸ್ಯರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಜೊತೆಗೆ ಅವಧಿ ಮುಗಿದರು ಕಾಮಗಾರಿ ಪೂರ್ಣಗೊಂಡಿಲ್ಲ.  ಈ ಬಗ್ಗೆ ಕ್ರಮವಹಿಸುವಂತೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ 2023ರ ಫೆಬ್ರವರಿ ತಿಂಗಳಲ್ಲಿ  ಕಾಮಗಾರಿ ನಡೆಸಲು ಟೆಂಡರ್ ಅನುಮೋದನೆ ಆಗಿರುತ್ತದೆ. ಅಮೃತ ನಗರೋತ್ಥಾನ  ಹಂತ-4 ರ ಯೋಜನೆಯಡಿ ಸುಮಾರು 20 ಕೋಟಿ ವೆಚ್ಚದ ವಿವಿಧ ಕಾಮಗಾರಿ ನಡೆಸಲು ಒಬ್ಬ ವ್ಯಕ್ತಿಗೆ ಗುತ್ತಿಗೆ  ನೀಡಲಾಗಿರುತ್ತದೆ.  ಕಾಮಗಾರಿ ಪೂರ್ಣಗೊಳಿಸಲು 18 ತಿಂಗಳ ಅವಧಿ  ಸಮಯ ನಿಗದಿ ಮಾಡಲಾಗಿರುತ್ತದೆ. ಆದರೆ, ಅವಧಿ ಮುಗಿದರು ಸಹಾ ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಬಗ್ಗೆ ಗುತ್ತಿಗೆದಾರ ಬಳಿ ಕೇಳಿದಾಗ, ಸರಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ನೆಪ ಹೇಳಿಕೊಂಡು ಕಾಮಗಾರಿ ಸ್ಥಗಿತ ಮಾಡಲಾಗಿದೆ. ಕಳೆದ ಜುಲೈ ತಿಂಗಳಲ್ಲಿ ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾ ಉಸ್ಥುವಾರಿ ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಜಿಲ್ಲಾಧಿಕಾರಿಗೆ ಕಾಮಗಾರಿ ವಿಳಂಬದ ಬಗ್ಗೆ ಗಮನಕ್ಕೆ ತರಲಾಗಿತ್ತು. ಸಕಾಲಕ್ಕೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕಾಮಗಾರಿಯ ಕೈಗೊಂಡ ಸಮಯದಲ್ಲಿ ರಸ್ತೆಗಳನ್ನೆಲ್ಲಾ ಅಗೆದು ಕೇವಲ ವೆಟ್ ಮಿಕ್ಸ್ ಮಾತ್ರ ಹಾಕಲಾಗಿತ್ತು. ಮಳೆ ಬಂದರೆ  ರಸ್ತೆಗಳೆಲ್ಲ ಕೆಸರು ಗದ್ದೆಯಂತಾಗುತ್ತವೆ. ಬಿಸಿಲು ಬಂದರೆ ಧೂಳಿನಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಜತೆಗೆ ನಗರದ ಪ್ರಮುಖ ರಸ್ತೆಗಳು ಡಾಂಬರೀಕರಣದ ಕಾಮಗಾರಿಯಲ್ಲಿ ಬರುವುದರಿಂದ ಗುತ್ತಿಗೆದಾರ ಈಗಾಗಲೇ ಕಾಮಗಾರಿ ಕೆಲಸ ಪ್ರಾರಂಭಿಸಿ ಅರೆಬರೆ ಕೆಲಸ ಮಾಡಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. 1 ಕೋಟಿ 80 ಲಕ್ಷ ವೆಚ್ಚದ ಬೀದಿ ದೀಪಗಳು ಸಹಾ ಈ ಕಾಮಗಾರಿಯಲ್ಲಿ ಇದೆ. ಆದರೆ, ಗುತ್ತಿಗೆದಾರ ಯಾವುದೇ ಕೆಲಸಮಾಡಿಲ್ಲ. ಎಲ್ಲೂ ಬೀದಿದೀಪಗಳು ಅಳವಡಿಸಿಲ್ಲ. ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಸಲ್ಲಿಸಲಾಗಿದೆ.

ನಗರ ಸಭಾ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಗುತ್ತಿಗೆದಾರ ಕಾಮಗಾರಿಯ ಅನುದಾನದವನ್ನು ರಾಜ್ಯ ಸಕರಕಾರ ಬಿಡುಗಡೆ ಮಾಡಿಲ್ಲವೆಂದು ಉತ್ತರಿಸಿದ್ದಾರೆ. ಈ ಕುರಿತು ನಗರಸಭೆ ಆಡಳಿತಕ್ಕೆ ಹಾಗೂ ಶಾಸಕರ ಗಮನಕ್ಕೆ ತರಲಾಗಿತ್ತು. ಆದ್ದರಿಂದ ಕಾಮಗಾರಿ ಪೂರ್ಣಗೊಳಿಸವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಸದಸ್ಯರಾದ ಟಿ.ಎನ್ ಪ್ರಭುದೇವ್, ರವಿಕುಮಾರ್, ಪದ್ಮನಾಭ, ಆರ್ ಲಕ್ಷ್ಮಿಪತಿ, ಶಿವರಾಜ್, ಭಾಸ್ಕರ್, ನಾಗರತ್ನಾ, ಹಂಸಪ್ರಿಯಾ, ವತ್ಸಲಾ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

4 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

7 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

7 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

20 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

21 hours ago