ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ರ ಯೋಜನೆಯಡಿಯಲ್ಲಿ ಸ್ಥಗಿತವಾಗಿರುವ ವಿವಿಧ ಕಾಮಗಾರಿಗಳು: ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಕಚೇರಿ ಎದರು ಕಪ್ಪು ಪಟ್ಟಿ ಧರಿಸಿ ಶಾಸಕ ಪ್ರತಿಭಟನೆ

ದೊಡ್ಡಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿನ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ರ ಯೋಜನೆಯಡಿಯಲ್ಲಿ ಸ್ಥಗಿತವಾಗಿರುವ ವಿವಿಧ ಕಾಮಗಾರಿಗಳನ್ನು ಶೀರ್ಘವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರಸಭೆ ಸದಸ್ಯರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಜೊತೆಗೆ ಅವಧಿ ಮುಗಿದರು ಕಾಮಗಾರಿ ಪೂರ್ಣಗೊಂಡಿಲ್ಲ.  ಈ ಬಗ್ಗೆ ಕ್ರಮವಹಿಸುವಂತೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ 2023ರ ಫೆಬ್ರವರಿ ತಿಂಗಳಲ್ಲಿ  ಕಾಮಗಾರಿ ನಡೆಸಲು ಟೆಂಡರ್ ಅನುಮೋದನೆ ಆಗಿರುತ್ತದೆ. ಅಮೃತ ನಗರೋತ್ಥಾನ  ಹಂತ-4 ರ ಯೋಜನೆಯಡಿ ಸುಮಾರು 20 ಕೋಟಿ ವೆಚ್ಚದ ವಿವಿಧ ಕಾಮಗಾರಿ ನಡೆಸಲು ಒಬ್ಬ ವ್ಯಕ್ತಿಗೆ ಗುತ್ತಿಗೆ  ನೀಡಲಾಗಿರುತ್ತದೆ.  ಕಾಮಗಾರಿ ಪೂರ್ಣಗೊಳಿಸಲು 18 ತಿಂಗಳ ಅವಧಿ  ಸಮಯ ನಿಗದಿ ಮಾಡಲಾಗಿರುತ್ತದೆ. ಆದರೆ, ಅವಧಿ ಮುಗಿದರು ಸಹಾ ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಬಗ್ಗೆ ಗುತ್ತಿಗೆದಾರ ಬಳಿ ಕೇಳಿದಾಗ, ಸರಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ನೆಪ ಹೇಳಿಕೊಂಡು ಕಾಮಗಾರಿ ಸ್ಥಗಿತ ಮಾಡಲಾಗಿದೆ. ಕಳೆದ ಜುಲೈ ತಿಂಗಳಲ್ಲಿ ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾ ಉಸ್ಥುವಾರಿ ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಜಿಲ್ಲಾಧಿಕಾರಿಗೆ ಕಾಮಗಾರಿ ವಿಳಂಬದ ಬಗ್ಗೆ ಗಮನಕ್ಕೆ ತರಲಾಗಿತ್ತು. ಸಕಾಲಕ್ಕೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕಾಮಗಾರಿಯ ಕೈಗೊಂಡ ಸಮಯದಲ್ಲಿ ರಸ್ತೆಗಳನ್ನೆಲ್ಲಾ ಅಗೆದು ಕೇವಲ ವೆಟ್ ಮಿಕ್ಸ್ ಮಾತ್ರ ಹಾಕಲಾಗಿತ್ತು. ಮಳೆ ಬಂದರೆ  ರಸ್ತೆಗಳೆಲ್ಲ ಕೆಸರು ಗದ್ದೆಯಂತಾಗುತ್ತವೆ. ಬಿಸಿಲು ಬಂದರೆ ಧೂಳಿನಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಜತೆಗೆ ನಗರದ ಪ್ರಮುಖ ರಸ್ತೆಗಳು ಡಾಂಬರೀಕರಣದ ಕಾಮಗಾರಿಯಲ್ಲಿ ಬರುವುದರಿಂದ ಗುತ್ತಿಗೆದಾರ ಈಗಾಗಲೇ ಕಾಮಗಾರಿ ಕೆಲಸ ಪ್ರಾರಂಭಿಸಿ ಅರೆಬರೆ ಕೆಲಸ ಮಾಡಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. 1 ಕೋಟಿ 80 ಲಕ್ಷ ವೆಚ್ಚದ ಬೀದಿ ದೀಪಗಳು ಸಹಾ ಈ ಕಾಮಗಾರಿಯಲ್ಲಿ ಇದೆ. ಆದರೆ, ಗುತ್ತಿಗೆದಾರ ಯಾವುದೇ ಕೆಲಸಮಾಡಿಲ್ಲ. ಎಲ್ಲೂ ಬೀದಿದೀಪಗಳು ಅಳವಡಿಸಿಲ್ಲ. ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಸಲ್ಲಿಸಲಾಗಿದೆ.

ನಗರ ಸಭಾ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಗುತ್ತಿಗೆದಾರ ಕಾಮಗಾರಿಯ ಅನುದಾನದವನ್ನು ರಾಜ್ಯ ಸಕರಕಾರ ಬಿಡುಗಡೆ ಮಾಡಿಲ್ಲವೆಂದು ಉತ್ತರಿಸಿದ್ದಾರೆ. ಈ ಕುರಿತು ನಗರಸಭೆ ಆಡಳಿತಕ್ಕೆ ಹಾಗೂ ಶಾಸಕರ ಗಮನಕ್ಕೆ ತರಲಾಗಿತ್ತು. ಆದ್ದರಿಂದ ಕಾಮಗಾರಿ ಪೂರ್ಣಗೊಳಿಸವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಸದಸ್ಯರಾದ ಟಿ.ಎನ್ ಪ್ರಭುದೇವ್, ರವಿಕುಮಾರ್, ಪದ್ಮನಾಭ, ಆರ್ ಲಕ್ಷ್ಮಿಪತಿ, ಶಿವರಾಜ್, ಭಾಸ್ಕರ್, ನಾಗರತ್ನಾ, ಹಂಸಪ್ರಿಯಾ, ವತ್ಸಲಾ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

7 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago