ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿ ಮತ್ತು ಮುಖದ ಮೇಲೆ ರಕ್ತದ ಗುರುತು: ಕೂದಲೆಳೆ ಅಂತರದಲ್ಲಿ ಬಚಾವ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ತಲೆಗೆ ನೇರವಾಗಿ ತಗುಲಬೇಕಿದ್ದ ಗುಂಡೇಟಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ‌.

ಬಟ್ಲರ್ ನ ಪೆನ್ಸಿಲ್ವೇನಿಯಾದಲ್ಲಿ ರ್ಯಾಲಿ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದು, ಗುಂಡು ಕಿವಿಗೆ ತಗುಲಿದ್ದರಿಂದ ಕಿವಿ ಹಾಗೂ ಮುಖದಲ್ಲಿ ರಕ್ತದ ಗುರುತು ಕಂಡುಬಂದಿದೆ. ಕೂಡಲೇ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿ, ವೇದಿಕೆಯಿಂದ‌ ಹೊರ ಕರೆದುಕೊಂಡುಬಂದಿದ್ದಾರೆ.

ರ್ಯಾಲಿ ವೇಳೆ ಬೃಹತ್ ಜನ ಸೇರಿದ್ದ ಮುಂಭಾಗದ ವೇದಿಕೆಯಲ್ಲಿದ್ದ ಟ್ರಂಪ್ ಮೇಲೆ ಗುಂಡಿನ ದಾಳಿಯಾಗಿದೆ. ಘಟನೆ ನಡೆದ ಕೂಡಲೆ ಪ್ರತಿರೋಧ ವ್ಯಕ್ತಪಡಿಸಿದ ಟ್ರಂಪ್, ಕೈ ಎತ್ತಿ ಮುಷ್ಠಿ ಹಿಡಿದು ಸಾರ್ವಜನಿಕರತ್ತ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ನವೆಂಬರ್‌ ನಲ್ಲಿ ನಡೆಯಲಿರುವ ಅಮೇರಿಕ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಬಿರುಸು ಪಡೆದಿತ್ತು. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಹಾಲಿ ಅಧ್ಯಕ್ಷ ಜೋ ಬೈಡನ್ ನಡುವೆ ತೀವ್ರ ಪೈಪೋಟಿಯೂ ಇದೆ. ಇಂತಹ ಸಂದರ್ಭದಲ್ಲಿ ಆಗಿರುವ ಟ್ರಂಪ್ ಮೇಲಿನ ಗುಂಡಿನ ದಾಳಿ ಅಮೆರಿಕ ದೇಶವನ್ನು ಬೆಚ್ಚಿ ಬೀಳಿಸಿದೆ.

ಸದ್ಯ ಟ್ರಂಪ್ ಸುರಕ್ಷಿತವಾಗಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸೀಕ್ರೆಟ್ ಸರ್ವಿಸ್ ಹೇಳಿಕೆಯಲ್ಲಿ ತಿಳಿಸಿದೆ.

ಶಂಕಿತ ಶೂಟರ್ ಸೇರಿ ಇಬ್ಬರು ಸಾವು:

ಶೂಟ್‌ ಮಾಡಿರುವ ಶಂಕಿತ ವ್ಯಕ್ತಿ ಸತ್ತಿದ್ದಾನೆ ಎಂದು ತಿಳಿದು ಬಂದಿದೆ. ಆತನ ಪಕ್ಕದಲ್ಲಿದ್ದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಟ್ಟು ಇಬ್ಬರು ಮೃತಪಟ್ಟಿದ್ದಾರೆ ಎಂದು ಯುಎಸ್‌ ಮಾಧ್ಯಮ ವರದಿ ಮಾಡಿದೆ.

Ramesh Babu

Journalist

Recent Posts

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

12 minutes ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

10 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

10 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

13 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

15 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

16 hours ago