ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇರಾನ್ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ. ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…