Categories: ಕೋಲಾರ

ಅಮೆರಿಕಾ ಉಪಾಧ್ಯಕ್ಷ ವ್ಯಾನ್ಸ್ ಭಾರತ ಭೇಟಿ: ಪ್ರಾಂತ ರೈತ ಸಂಘ ವಿರೋಧ

ಕೋಲಾರ: ಅಮೇರಿಕಾ ದೇಶದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ನಗರದ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿ ಮುಂದೆ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಮಾರುಕಟ್ಟೆ, ಕೈಗಾರಿಕಾ ಬಿಡಿ ಉತ್ಪನ್ನಗಳನ್ನು ಆಮೇರಿಕಾ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಆಮೇರಿಕಾ ಉಪಾಧ್ಯಕ್ಷ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಾಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ ಎಂದು ಆರೋಪಿಸಿದರು.

ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದ ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳ ರೈತ ಕುಟುಂಬಗಳು ತಮ್ಮ ಜೀವನಾಧಾರಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿವೆ ತರಕಾರಿ, ಮೀನುಗಾರಿಕೆ ಕೃಷಿಯನ್ನು ಅವಲಂಬಿಸಿದೆ. ಈ ಎಲ್ಲಾ ಕೃಷಿ ಉತ್ಪನ್ನಗಳು ಈಗಾಗಲೇ ಬೆಂಬಲ ಬೆಲೆ ಅಭಾವ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಷ್ಟ ಹಾಗೂ ನಷ್ಟವನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕ ರಹಿತ ಅಮದು ಈ ಎಲ್ಲಾ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ-ಸಾಲಭಾಧೆಗೆ ಸಿಲುಕಿಸಲಿದೆ ಎಂದರು.

ಅಮೇರಿಕಾದಲ್ಲಿ ಶೇಕಡಾ 70 ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ , ಮೆಕ್ಸಿಕೋ ಮುಂತಾದ ದೇಶಗಳು ಆಮೇರಿಕಾದ ಸುಂಕ ಸಮರದ ಬೆದರಿಕೆಗೆ ಯಾವುದೇ ರೀತಿಯಲ್ಲಿ ಮಣಿಯದೇ ತಿರುಗೇಟು ನೀಡಿದೆ. ಆದರೆ ಆಮೇರಿಕಾದ ಜೊತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಸ್ವತಃ ನರೇಂದ್ರ ಮೋದಿರವರ ಸಮ್ಮುಖದಲ್ಲೇ ಭಾರತವನ್ನು ಸುಂಕ ರಾಜ ಎಂದು ಡೋನಾಲ್ಡ್ ಟ್ರಂಪ್ ಅಣಕಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದಾಗಲೂ, ಭಾರತದ ವಲಸೆ ಕಾರ್ಮಿಕರನ್ನು ಕೋಳ ತೊಡಿಸಿ ಅಮಾನವೀಯವಾಗಿ ನಡೆಸಿಕೊಂಡಾಗಲೂ ಸೂಕ್ತ ಪ್ರತಿಭಟನೆ ವ್ಯಕ್ತಪಡಿಸಿಲ್ಲ ಎಂದರು.

ಕೆಲವೇ ಕೆಲವು ದೊಡ್ಡ ಉದ್ಯಮಿಗಳ ರಪ್ತು ವ್ಯವಹಾರಕ್ಕಾಗಿ, ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಾಗಿ ಕೋಟ್ಯಾಂತರ ರೈತರ ಜೀವನೋಪಾಯ ಸರ್ವನಾಶ ಮಾಡುವ ಮಾತುಕತೆಗಳು ಆಹಾರ ಭದ್ರತೆ, ಆಹಾರ ಸ್ವಾವಲಂಬನೆ ಅಂತಿಮವಾಗಿ ದೇಶದ ಸಾರ್ವಭೌಮತ್ವ ವನ್ನು ಅಪಾಯಕಾರಿ ಪರಿಸ್ಥಿತಿಗೆ ಕೊಂಡೊಯ್ಯಲಿದೆ. ವಾನ್ಸ್ ಭೇಟಿ ಹಿನ್ನೆಲೆಯಲ್ಲಿ ಆಮೇರಿಕಾ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ರವರು ಕೃಷಿ ಮಾರುಕಟ್ಟೆ ಮುಕ್ತಗೊಳಿಸುವುದೇ ಭಾರತದ ಮಾತುಕತೆಯಲ್ಲಿ ಪ್ರಮುಖ ಅಧ್ಯತಾ ವಿಷಯವಾಗಿದ್ದು ಯಾವುದೇ ಸುಂಕ ಹಾಗೂ ಇತರೆ ತಡೆಗಳನ್ನು ನಿವಾರಿಸಬೇಕು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದ್ದರಿಂದ ಆಮೇರಿಕಾ ಉಪಾಧ್ಯಕ್ಷ ಜೊತೆ ವಾಣಿಜ್ಯ ಮಾತುಕತೆಗಳನ್ನು ರದ್ದುಪಡಿಸಬೇಕು. ಆಮೇರಿಕಾದ ಸುಂಕ ಸಮರದಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಕೂಡಲೇ ಸಂಸತ್ತು ಹಾಗೂ ಶಾಸನಸಭೆಗಳಲ್ಲಿ ಚರ್ಚಿಸಿ ಸೂಕ್ತ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.

ಈ ಪ್ರತಿಭಟನೆ ನೇತೃತ್ವವನ್ನು ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಉಪಾಧ್ಯಕ್ಷರಾದ ಎನ್.ಎನ್.ಶ್ರೀರಾಮ್, ಗಂಗಮ್ಮ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಶ್ರೀಧರ್ ರೆಡ್ಡಿ, ವಿರೇಗೌಡ, ನಾರಾಯಣಸ್ವಾಮಿ, ರಾಜೇಂದ್ರಪ್ರಸಾದ್, ನೀಲಮ್ಮ, ಸರೋಜಮ್ಮ, ನಾರಾಯಣಪ್ಪ, ವಿಜಯಕೃಷ್ಣ, ಎಂ.ಭೀಮರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

4 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

4 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

6 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

14 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

23 hours ago