Categories: ಕೋಲಾರ

ಅಮೆರಿಕಾ ಉಪಾಧ್ಯಕ್ಷ ವ್ಯಾನ್ಸ್ ಭಾರತ ಭೇಟಿ: ಪ್ರಾಂತ ರೈತ ಸಂಘ ವಿರೋಧ

ಕೋಲಾರ: ಅಮೇರಿಕಾ ದೇಶದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ನಗರದ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿ ಮುಂದೆ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಮಾರುಕಟ್ಟೆ, ಕೈಗಾರಿಕಾ ಬಿಡಿ ಉತ್ಪನ್ನಗಳನ್ನು ಆಮೇರಿಕಾ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಆಮೇರಿಕಾ ಉಪಾಧ್ಯಕ್ಷ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಾಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ ಎಂದು ಆರೋಪಿಸಿದರು.

ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದ ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳ ರೈತ ಕುಟುಂಬಗಳು ತಮ್ಮ ಜೀವನಾಧಾರಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿವೆ ತರಕಾರಿ, ಮೀನುಗಾರಿಕೆ ಕೃಷಿಯನ್ನು ಅವಲಂಬಿಸಿದೆ. ಈ ಎಲ್ಲಾ ಕೃಷಿ ಉತ್ಪನ್ನಗಳು ಈಗಾಗಲೇ ಬೆಂಬಲ ಬೆಲೆ ಅಭಾವ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಷ್ಟ ಹಾಗೂ ನಷ್ಟವನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕ ರಹಿತ ಅಮದು ಈ ಎಲ್ಲಾ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ-ಸಾಲಭಾಧೆಗೆ ಸಿಲುಕಿಸಲಿದೆ ಎಂದರು.

ಅಮೇರಿಕಾದಲ್ಲಿ ಶೇಕಡಾ 70 ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ , ಮೆಕ್ಸಿಕೋ ಮುಂತಾದ ದೇಶಗಳು ಆಮೇರಿಕಾದ ಸುಂಕ ಸಮರದ ಬೆದರಿಕೆಗೆ ಯಾವುದೇ ರೀತಿಯಲ್ಲಿ ಮಣಿಯದೇ ತಿರುಗೇಟು ನೀಡಿದೆ. ಆದರೆ ಆಮೇರಿಕಾದ ಜೊತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಸ್ವತಃ ನರೇಂದ್ರ ಮೋದಿರವರ ಸಮ್ಮುಖದಲ್ಲೇ ಭಾರತವನ್ನು ಸುಂಕ ರಾಜ ಎಂದು ಡೋನಾಲ್ಡ್ ಟ್ರಂಪ್ ಅಣಕಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದಾಗಲೂ, ಭಾರತದ ವಲಸೆ ಕಾರ್ಮಿಕರನ್ನು ಕೋಳ ತೊಡಿಸಿ ಅಮಾನವೀಯವಾಗಿ ನಡೆಸಿಕೊಂಡಾಗಲೂ ಸೂಕ್ತ ಪ್ರತಿಭಟನೆ ವ್ಯಕ್ತಪಡಿಸಿಲ್ಲ ಎಂದರು.

ಕೆಲವೇ ಕೆಲವು ದೊಡ್ಡ ಉದ್ಯಮಿಗಳ ರಪ್ತು ವ್ಯವಹಾರಕ್ಕಾಗಿ, ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಾಗಿ ಕೋಟ್ಯಾಂತರ ರೈತರ ಜೀವನೋಪಾಯ ಸರ್ವನಾಶ ಮಾಡುವ ಮಾತುಕತೆಗಳು ಆಹಾರ ಭದ್ರತೆ, ಆಹಾರ ಸ್ವಾವಲಂಬನೆ ಅಂತಿಮವಾಗಿ ದೇಶದ ಸಾರ್ವಭೌಮತ್ವ ವನ್ನು ಅಪಾಯಕಾರಿ ಪರಿಸ್ಥಿತಿಗೆ ಕೊಂಡೊಯ್ಯಲಿದೆ. ವಾನ್ಸ್ ಭೇಟಿ ಹಿನ್ನೆಲೆಯಲ್ಲಿ ಆಮೇರಿಕಾ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ರವರು ಕೃಷಿ ಮಾರುಕಟ್ಟೆ ಮುಕ್ತಗೊಳಿಸುವುದೇ ಭಾರತದ ಮಾತುಕತೆಯಲ್ಲಿ ಪ್ರಮುಖ ಅಧ್ಯತಾ ವಿಷಯವಾಗಿದ್ದು ಯಾವುದೇ ಸುಂಕ ಹಾಗೂ ಇತರೆ ತಡೆಗಳನ್ನು ನಿವಾರಿಸಬೇಕು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದ್ದರಿಂದ ಆಮೇರಿಕಾ ಉಪಾಧ್ಯಕ್ಷ ಜೊತೆ ವಾಣಿಜ್ಯ ಮಾತುಕತೆಗಳನ್ನು ರದ್ದುಪಡಿಸಬೇಕು. ಆಮೇರಿಕಾದ ಸುಂಕ ಸಮರದಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಕೂಡಲೇ ಸಂಸತ್ತು ಹಾಗೂ ಶಾಸನಸಭೆಗಳಲ್ಲಿ ಚರ್ಚಿಸಿ ಸೂಕ್ತ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.

ಈ ಪ್ರತಿಭಟನೆ ನೇತೃತ್ವವನ್ನು ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಉಪಾಧ್ಯಕ್ಷರಾದ ಎನ್.ಎನ್.ಶ್ರೀರಾಮ್, ಗಂಗಮ್ಮ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಶ್ರೀಧರ್ ರೆಡ್ಡಿ, ವಿರೇಗೌಡ, ನಾರಾಯಣಸ್ವಾಮಿ, ರಾಜೇಂದ್ರಪ್ರಸಾದ್, ನೀಲಮ್ಮ, ಸರೋಜಮ್ಮ, ನಾರಾಯಣಪ್ಪ, ವಿಜಯಕೃಷ್ಣ, ಎಂ.ಭೀಮರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

52 minutes ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

3 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

15 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

18 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

18 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 day ago