Categories: ಕೋಲಾರ

ಅಮೆರಿಕಾ ಉಪಾಧ್ಯಕ್ಷ ವ್ಯಾನ್ಸ್ ಭಾರತ ಭೇಟಿ: ಪ್ರಾಂತ ರೈತ ಸಂಘ ವಿರೋಧ

ಕೋಲಾರ: ಅಮೇರಿಕಾ ದೇಶದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ನಗರದ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿ ಮುಂದೆ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಮಾರುಕಟ್ಟೆ, ಕೈಗಾರಿಕಾ ಬಿಡಿ ಉತ್ಪನ್ನಗಳನ್ನು ಆಮೇರಿಕಾ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಆಮೇರಿಕಾ ಉಪಾಧ್ಯಕ್ಷ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಾಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ ಎಂದು ಆರೋಪಿಸಿದರು.

ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದ ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳ ರೈತ ಕುಟುಂಬಗಳು ತಮ್ಮ ಜೀವನಾಧಾರಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿವೆ ತರಕಾರಿ, ಮೀನುಗಾರಿಕೆ ಕೃಷಿಯನ್ನು ಅವಲಂಬಿಸಿದೆ. ಈ ಎಲ್ಲಾ ಕೃಷಿ ಉತ್ಪನ್ನಗಳು ಈಗಾಗಲೇ ಬೆಂಬಲ ಬೆಲೆ ಅಭಾವ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಷ್ಟ ಹಾಗೂ ನಷ್ಟವನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕ ರಹಿತ ಅಮದು ಈ ಎಲ್ಲಾ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ-ಸಾಲಭಾಧೆಗೆ ಸಿಲುಕಿಸಲಿದೆ ಎಂದರು.

ಅಮೇರಿಕಾದಲ್ಲಿ ಶೇಕಡಾ 70 ರಷ್ಟು ಮಾರುಕಟ್ಟೆ ಹೊಂದಿದ್ದ ಚೀನಾ, ಕೆನಡಾ , ಮೆಕ್ಸಿಕೋ ಮುಂತಾದ ದೇಶಗಳು ಆಮೇರಿಕಾದ ಸುಂಕ ಸಮರದ ಬೆದರಿಕೆಗೆ ಯಾವುದೇ ರೀತಿಯಲ್ಲಿ ಮಣಿಯದೇ ತಿರುಗೇಟು ನೀಡಿದೆ. ಆದರೆ ಆಮೇರಿಕಾದ ಜೊತೆ ವ್ಯಾಪಾರದ ಕೊರತೆ ಇರುವ ಭಾರತ ಇಂತಹ ದಿಟ್ಟ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಸ್ವತಃ ನರೇಂದ್ರ ಮೋದಿರವರ ಸಮ್ಮುಖದಲ್ಲೇ ಭಾರತವನ್ನು ಸುಂಕ ರಾಜ ಎಂದು ಡೋನಾಲ್ಡ್ ಟ್ರಂಪ್ ಅಣಕಿಸಿ ಸ್ವಾಭಿಮಾನಕ್ಕೆ ಧಕ್ಕೆ ತಂದಾಗಲೂ, ಭಾರತದ ವಲಸೆ ಕಾರ್ಮಿಕರನ್ನು ಕೋಳ ತೊಡಿಸಿ ಅಮಾನವೀಯವಾಗಿ ನಡೆಸಿಕೊಂಡಾಗಲೂ ಸೂಕ್ತ ಪ್ರತಿಭಟನೆ ವ್ಯಕ್ತಪಡಿಸಿಲ್ಲ ಎಂದರು.

ಕೆಲವೇ ಕೆಲವು ದೊಡ್ಡ ಉದ್ಯಮಿಗಳ ರಪ್ತು ವ್ಯವಹಾರಕ್ಕಾಗಿ, ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಾಗಿ ಕೋಟ್ಯಾಂತರ ರೈತರ ಜೀವನೋಪಾಯ ಸರ್ವನಾಶ ಮಾಡುವ ಮಾತುಕತೆಗಳು ಆಹಾರ ಭದ್ರತೆ, ಆಹಾರ ಸ್ವಾವಲಂಬನೆ ಅಂತಿಮವಾಗಿ ದೇಶದ ಸಾರ್ವಭೌಮತ್ವ ವನ್ನು ಅಪಾಯಕಾರಿ ಪರಿಸ್ಥಿತಿಗೆ ಕೊಂಡೊಯ್ಯಲಿದೆ. ವಾನ್ಸ್ ಭೇಟಿ ಹಿನ್ನೆಲೆಯಲ್ಲಿ ಆಮೇರಿಕಾ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ರವರು ಕೃಷಿ ಮಾರುಕಟ್ಟೆ ಮುಕ್ತಗೊಳಿಸುವುದೇ ಭಾರತದ ಮಾತುಕತೆಯಲ್ಲಿ ಪ್ರಮುಖ ಅಧ್ಯತಾ ವಿಷಯವಾಗಿದ್ದು ಯಾವುದೇ ಸುಂಕ ಹಾಗೂ ಇತರೆ ತಡೆಗಳನ್ನು ನಿವಾರಿಸಬೇಕು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದ್ದರಿಂದ ಆಮೇರಿಕಾ ಉಪಾಧ್ಯಕ್ಷ ಜೊತೆ ವಾಣಿಜ್ಯ ಮಾತುಕತೆಗಳನ್ನು ರದ್ದುಪಡಿಸಬೇಕು. ಆಮೇರಿಕಾದ ಸುಂಕ ಸಮರದಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಕೂಡಲೇ ಸಂಸತ್ತು ಹಾಗೂ ಶಾಸನಸಭೆಗಳಲ್ಲಿ ಚರ್ಚಿಸಿ ಸೂಕ್ತ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.

ಈ ಪ್ರತಿಭಟನೆ ನೇತೃತ್ವವನ್ನು ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಉಪಾಧ್ಯಕ್ಷರಾದ ಎನ್.ಎನ್.ಶ್ರೀರಾಮ್, ಗಂಗಮ್ಮ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಶ್ರೀಧರ್ ರೆಡ್ಡಿ, ವಿರೇಗೌಡ, ನಾರಾಯಣಸ್ವಾಮಿ, ರಾಜೇಂದ್ರಪ್ರಸಾದ್, ನೀಲಮ್ಮ, ಸರೋಜಮ್ಮ, ನಾರಾಯಣಪ್ಪ, ವಿಜಯಕೃಷ್ಣ, ಎಂ.ಭೀಮರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago