ಕೋಲಾರ: ಅಮೇರಿಕಾ ದೇಶದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ನಗರದ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿ ಮುಂದೆ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಮಾರುಕಟ್ಟೆ, ಕೈಗಾರಿಕಾ ಬಿಡಿ ಉತ್ಪನ್ನಗಳನ್ನು ಆಮೇರಿಕಾ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಆಮೇರಿಕಾ ಉಪಾಧ್ಯಕ್ಷ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಾಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ ಎಂದು ಆರೋಪಿಸಿದರು.
ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದ ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳ ರೈತ ಕುಟುಂಬಗಳು ತಮ್ಮ ಜೀವನಾಧಾರಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿವೆ ತರಕಾರಿ, ಮೀನುಗಾರಿಕೆ ಕೃಷಿಯನ್ನು ಅವಲಂಬಿಸಿದೆ. ಈ ಎಲ್ಲಾ ಕೃಷಿ ಉತ್ಪನ್ನಗಳು ಈಗಾಗಲೇ ಬೆಂಬಲ ಬೆಲೆ ಅಭಾವ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಷ್ಟ ಹಾಗೂ ನಷ್ಟವನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕ ರಹಿತ ಅಮದು ಈ ಎಲ್ಲಾ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ-ಸಾಲಭಾಧೆಗೆ ಸಿಲುಕಿಸಲಿದೆ ಎಂದರು.
ಕೆಲವೇ ಕೆಲವು ದೊಡ್ಡ ಉದ್ಯಮಿಗಳ ರಪ್ತು ವ್ಯವಹಾರಕ್ಕಾಗಿ, ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಾಗಿ ಕೋಟ್ಯಾಂತರ ರೈತರ ಜೀವನೋಪಾಯ ಸರ್ವನಾಶ ಮಾಡುವ ಮಾತುಕತೆಗಳು ಆಹಾರ ಭದ್ರತೆ, ಆಹಾರ ಸ್ವಾವಲಂಬನೆ ಅಂತಿಮವಾಗಿ ದೇಶದ ಸಾರ್ವಭೌಮತ್ವ ವನ್ನು ಅಪಾಯಕಾರಿ ಪರಿಸ್ಥಿತಿಗೆ ಕೊಂಡೊಯ್ಯಲಿದೆ. ವಾನ್ಸ್ ಭೇಟಿ ಹಿನ್ನೆಲೆಯಲ್ಲಿ ಆಮೇರಿಕಾ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ರವರು ಕೃಷಿ ಮಾರುಕಟ್ಟೆ ಮುಕ್ತಗೊಳಿಸುವುದೇ ಭಾರತದ ಮಾತುಕತೆಯಲ್ಲಿ ಪ್ರಮುಖ ಅಧ್ಯತಾ ವಿಷಯವಾಗಿದ್ದು ಯಾವುದೇ ಸುಂಕ ಹಾಗೂ ಇತರೆ ತಡೆಗಳನ್ನು ನಿವಾರಿಸಬೇಕು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದ್ದರಿಂದ ಆಮೇರಿಕಾ ಉಪಾಧ್ಯಕ್ಷ ಜೊತೆ ವಾಣಿಜ್ಯ ಮಾತುಕತೆಗಳನ್ನು ರದ್ದುಪಡಿಸಬೇಕು. ಆಮೇರಿಕಾದ ಸುಂಕ ಸಮರದಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಕೂಡಲೇ ಸಂಸತ್ತು ಹಾಗೂ ಶಾಸನಸಭೆಗಳಲ್ಲಿ ಚರ್ಚಿಸಿ ಸೂಕ್ತ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಪ್ರತಿಭಟನೆ ನೇತೃತ್ವವನ್ನು ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಉಪಾಧ್ಯಕ್ಷರಾದ ಎನ್.ಎನ್.ಶ್ರೀರಾಮ್, ಗಂಗಮ್ಮ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಶ್ರೀಧರ್ ರೆಡ್ಡಿ, ವಿರೇಗೌಡ, ನಾರಾಯಣಸ್ವಾಮಿ, ರಾಜೇಂದ್ರಪ್ರಸಾದ್, ನೀಲಮ್ಮ, ಸರೋಜಮ್ಮ, ನಾರಾಯಣಪ್ಪ, ವಿಜಯಕೃಷ್ಣ, ಎಂ.ಭೀಮರಾಜ್ ಮುಂತಾದವರು ಇದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…