ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು.ದೇವಾಲಯದ ಮುಂಭಾಗ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೋಬಳಿ ಕೇಂದ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಸ್ ನಿಲ್ದಾಣದಲ್ಲಿ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಭಕ್ತರಿಗೆ ಪಾನಕ,ಮಜ್ಜಿಗೆ ಹಾಗೂ ಕೋಸಂಬರಿ ವಿತರಣೆ ಮಾಡಲಾಗಿದೆ. ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರೀತಾಮ ಕಲ್ಯಾಣೋತ್ಸವ ಜರುಗಿಸಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಪ್ರತಾಪ್ ತಿಳಿಸಿದರು.
ಬಿಜೆಪಿ ಮುಖಂಡ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರತಿಯೊಬ್ಬರಲ್ಲೂ ಶ್ರೀರಾಮನ ಸಂಭ್ರಮವು ಮನೆ ಮಾಡಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…