ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ತೂಬಗೆರೆಯಲ್ಲಿ ಅದ್ಧೂರಿ ಸೀತಾರಾಮ ಕಲ್ಯಾಣೋತ್ಸವ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು.ದೇವಾಲಯದ ಮುಂಭಾಗ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೋಬಳಿ ಕೇಂದ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಸ್ ನಿಲ್ದಾಣದಲ್ಲಿ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಭಕ್ತರಿಗೆ ಪಾನಕ,ಮಜ್ಜಿಗೆ ಹಾಗೂ ಕೋಸಂಬರಿ ವಿತರಣೆ ಮಾಡಲಾಗಿದೆ. ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರೀತಾಮ ಕಲ್ಯಾಣೋತ್ಸವ ಜರುಗಿಸಲಾಗಿದೆ ಎಂದು ಬಿಜೆಪಿ‌ ಮುಖಂಡ ಹಾಗೂ ವಕೀಲ ಪ್ರತಾಪ್ ತಿಳಿಸಿದರು.

ಶತಮಾನಗಳ ಸುದೀರ್ಘ ಕಾಯುವಿಕೆ ಬಳಿಕ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಮಾಡಲಾಗಿದೆ. ದೇಶದ ಜನತೆಗೆ ಶ್ರೀರಾಮ ಒಳ್ಳೆಯದು ಮಾಡಲಿ, ಸುಖ:, ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥನೆ ಮಾಡಲಾಗಿದೆ ಎಂದು ಹೇಳಿದರು.

ಬಿಜೆಪಿ ಮುಖಂಡ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರತಿಯೊಬ್ಬರಲ್ಲೂ ಶ್ರೀರಾಮನ ಸಂಭ್ರಮವು ಮನೆ ಮಾಡಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ ಎಂದರು.

ಈ ವೇಳೆ ರಾಮನ ಭಕ್ತರು, ಊರಿನ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

4 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

16 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

17 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

20 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago