ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ತೂಬಗೆರೆಯಲ್ಲಿ ಅದ್ಧೂರಿ ಸೀತಾರಾಮ ಕಲ್ಯಾಣೋತ್ಸವ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು.ದೇವಾಲಯದ ಮುಂಭಾಗ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೋಬಳಿ ಕೇಂದ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಸ್ ನಿಲ್ದಾಣದಲ್ಲಿ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಭಕ್ತರಿಗೆ ಪಾನಕ,ಮಜ್ಜಿಗೆ ಹಾಗೂ ಕೋಸಂಬರಿ ವಿತರಣೆ ಮಾಡಲಾಗಿದೆ. ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರೀತಾಮ ಕಲ್ಯಾಣೋತ್ಸವ ಜರುಗಿಸಲಾಗಿದೆ ಎಂದು ಬಿಜೆಪಿ‌ ಮುಖಂಡ ಹಾಗೂ ವಕೀಲ ಪ್ರತಾಪ್ ತಿಳಿಸಿದರು.

ಶತಮಾನಗಳ ಸುದೀರ್ಘ ಕಾಯುವಿಕೆ ಬಳಿಕ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಮಾಡಲಾಗಿದೆ. ದೇಶದ ಜನತೆಗೆ ಶ್ರೀರಾಮ ಒಳ್ಳೆಯದು ಮಾಡಲಿ, ಸುಖ:, ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥನೆ ಮಾಡಲಾಗಿದೆ ಎಂದು ಹೇಳಿದರು.

ಬಿಜೆಪಿ ಮುಖಂಡ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರತಿಯೊಬ್ಬರಲ್ಲೂ ಶ್ರೀರಾಮನ ಸಂಭ್ರಮವು ಮನೆ ಮಾಡಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ ಎಂದರು.

ಈ ವೇಳೆ ರಾಮನ ಭಕ್ತರು, ಊರಿನ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

19 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

19 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

22 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago