ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು. ದೇವಾಲಯದ ಮುಂಭಾಗ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೋಬಳಿ ಕೇಂದ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಸ್ ನಿಲ್ದಾಣದಲ್ಲಿ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಭಕ್ತರಿಗೆ ಪಾನಕ,ಮಜ್ಜಿಗೆ ಹಾಗೂ ಕೋಸಂಬರಿ ವಿತರಣೆ ಮಾಡಲಾಗಿದೆ. ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರೀತಾಮ ಕಲ್ಯಾಣೋತ್ಸವ ಜರುಗಿಸಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಪ್ರತಾಪ್ ತಿಳಿಸಿದರು.
ಬಿಜೆಪಿ ಮುಖಂಡ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರತಿಯೊಬ್ಬರಲ್ಲೂ ಶ್ರೀರಾಮನ ಸಂಭ್ರಮವು ಮನೆ ಮಾಡಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ ಎಂದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…