ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು. ದೇವಾಲಯದ ಮುಂಭಾಗ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೋಬಳಿ ಕೇಂದ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಸ್ ನಿಲ್ದಾಣದಲ್ಲಿ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಭಕ್ತರಿಗೆ ಪಾನಕ,ಮಜ್ಜಿಗೆ ಹಾಗೂ ಕೋಸಂಬರಿ ವಿತರಣೆ ಮಾಡಲಾಗಿದೆ. ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರೀತಾಮ ಕಲ್ಯಾಣೋತ್ಸವ ಜರುಗಿಸಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಪ್ರತಾಪ್ ತಿಳಿಸಿದರು.
ಬಿಜೆಪಿ ಮುಖಂಡ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರತಿಯೊಬ್ಬರಲ್ಲೂ ಶ್ರೀರಾಮನ ಸಂಭ್ರಮವು ಮನೆ ಮಾಡಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ ಎಂದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…