ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು ಎಂದು ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ ಎಂದು ಹೇಳಿದ್ದಾರೆ.
ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಎಂದಿದ್ದಾರೆ.
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…