ಅಯೋಧ್ಯೆ ರಾಮನ ದರ್ಶನಕ್ಕೆ ಪಯಣ ಬೆಳೆಸಿದ “ಬಸಪ್ಪ”

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಅಷ್ಟು ದೂರ ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿದೆ.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿದೆ. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದು, ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

ನಿನ್ನೆ (ಸೆ.19) ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಾಸುದೇವಾ ಚಾರ್ ನೇತೃತ್ವದಲ್ಲಿ ಎಲ್ಲಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಬಸಪ್ಪನ ಯಾತ್ರೆಗೆ ಚಾಲನೆ ನೀಡಲಾಯಿತು.

ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ವಾಸುದೇವಾ ಚಾರ್, ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಹೊರಟಿದೆ. ಅದೇರೀತಿ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಇರಲಿದೆ. ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಗುವುದು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago