ಅಯೋಧ್ಯೆ ರಾಮನ ದರ್ಶನಕ್ಕೆ ಪಯಣ ಬೆಳೆಸಿದ “ಬಸಪ್ಪ”

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಅಷ್ಟು ದೂರ ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿದೆ.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿದೆ. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದು, ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

ನಿನ್ನೆ (ಸೆ.19) ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಾಸುದೇವಾ ಚಾರ್ ನೇತೃತ್ವದಲ್ಲಿ ಎಲ್ಲಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಬಸಪ್ಪನ ಯಾತ್ರೆಗೆ ಚಾಲನೆ ನೀಡಲಾಯಿತು.

ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ವಾಸುದೇವಾ ಚಾರ್, ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಹೊರಟಿದೆ. ಅದೇರೀತಿ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಇರಲಿದೆ. ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಗುವುದು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

23 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago