ಅಯೋಧ್ಯೆ ರಾಮನ ದರ್ಶನಕ್ಕೆ ಪಯಣ ಬೆಳೆಸಿದ “ಬಸಪ್ಪ”

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಅಷ್ಟು ದೂರ ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿದೆ.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿದೆ. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದು, ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

ನಿನ್ನೆ (ಸೆ.19) ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಾಸುದೇವಾ ಚಾರ್ ನೇತೃತ್ವದಲ್ಲಿ ಎಲ್ಲಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಬಸಪ್ಪನ ಯಾತ್ರೆಗೆ ಚಾಲನೆ ನೀಡಲಾಯಿತು.

ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ವಾಸುದೇವಾ ಚಾರ್, ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಹೊರಟಿದೆ. ಅದೇರೀತಿ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಇರಲಿದೆ. ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಗುವುದು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago